ಭಾರತ ಒಂದು ಬಲಾಢ್ಯ ರಾಷ್ಟ್ರ, ಹಿಂದೆ ಶತಮಾನಗಳ ಕಾಲ ಹಿಂದೂಸ್ತಾನವನ್ನು ಆಳಿದ ಮೊಘಲರಿಂದಲೇ ಅದನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವುದು ಸಾಧ್ಯವಾಗಲಿಲ್ಲ. ಇನ್ನು ಪಿಎಫ್ಐ (PFI) ನಂಥ ಒಂದು ಸಂಘಟನೆ ಭಾರತವನ್ನು ಒಂದು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡೀತೇ? ಎಂದು ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (Kumarswamy) ಪ್ರಶ್ನಿಸಿದರು.
ಕರ್ನಾಟಕದಲ್ಲಿ ನಡೆದ 3-4 ಕೊಲೆ ಮತ್ತು ಕೇರಳದಲ್ಲಿ ನಡೆದ ಕೆಲ ಘಟನೆಗಳ ಆಧಾರದಲ್ಲಿ ಪಿಎಫ್ಐ ಮತ್ತು ಅದರ ಅಂಗಸಂಸ್ಥೆಗಳನ್ನು ಬ್ಯಾನ್ ಮಾಡಲಾಗಿದೆ ಅಂತ ಕೇಂದ್ರ ಸರ್ಕಾರ (Central government) ಹೇಳಿದೆ. ಆ ಸಂಘಟನೆಯ ಸದಸ್ಯರು ಯಾವ್ಯಾವ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಅನ್ನೋದನ್ನು ರಾಜ್ಯ ಸರ್ಕಾರ ಜನರ ಮುಂದಿಡಬೇಕೇ ಹೊರತು ಸಂಘಟನೆ ಬಗ್ಗೆ ಇಲ್ಲಸಲ್ಲದ್ದು ಹೇಳಿ ಭಯದ ವಾತಾವರಣ ಮೂಡಿಸಬಾರದು ಎಂದು ಹೇಳಿದರು. ಸರ್ಕಾರ ಒಂದು ಸಂಘಟನೆಗೆ ತ್ರಿಶೂಲ, ಲಾಠಿ ಕೊಟ್ಟು ಪ್ರೋತ್ಸಾಹ ಮಾಡುತ್ತೀರಿ.ಇದನ್ನೂ ಓದಿ : – ಕಾನೂನು ಪ್ರಕಾರ ಗರ್ಭಪಾತಕ್ಕೆ ಎಲ್ಲಾ ಮಹಿಳೆಯರು ಅರ್ಹರು – ಸುಪ್ರೀಂಕೋರ್ಟ್ ಮಹತ್ವದ ಆದೇಶ
ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಅಂತೀರಾ, ಹೊರ ದೇಶದ ಹಣ ತಂದು ಭಯೋತ್ಪಾದನೆ ಮಾಡುವವರನ್ನ ಬಲಿ ಹಾಕಲು ನಮ್ಮದು ಯಾವುದೆ ತಕರಾರು ಇಲ್ಲ,ಕಳೆದ 3 ವರ್ಷದಲ್ಲಿ ಮನೆಗಳು ಕುಸಿದು ಬಿದ್ದು 17 ಸಾವಿರ ಕೋಟಿ ನಷ್ಟ ಆಗಿದೆ ಅನಾಹುತ ಆಗಿದೆ ಎನ್ನಲಾಗಿದೆ. ಅದರ ಬಗ್ಗೆ ಸರ್ಕಾರಗಳ ಗಮನ ಹರಿಸಬೇಕಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : – ನಿಜವಾಗಲೂ ಅವರಿಗೆ ಬದ್ಧತೆ ಇದ್ದಿದ್ದರೆ ಸರ್ಕಾರ ಬಂದಾಗಲೇ ಬ್ಯಾನ್ ಮಾಡಬೇಕಿತ್ತು – ಯತೀಂದ್ರ ಸಿದ್ದರಾಮಯ್ಯ