ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ( karanataka ) ದಲ್ಲಿ ಮಳೆ ಹೆಚ್ಚಾಗಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ.
ಬೆಂಗಳೂರಿನಲ್ಲೂ ಕಳೆದ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇಂದಿನಿಂದ ಆಗಸ್ಟ್ 31 ರವರೆಗೂ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ( kodagu ) ಹಾಸನ, ಕೋಲಾರ, ಮೈಸೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿಯ ಗಣೇಶ ಚತುರ್ಥಿಯವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಇದನ್ನೂ ಓದಿ : – ಬಿಡಿಎ ಆಯುಕ್ತ ರಾಜೇಶ್ ಗೌಡ ಎತ್ತಂಗಡಿ – ನೂತನ ಆಯುಕ್ತರಾಗಿ ಕುಮಾರ್ ನಾಯ್ಕ್ ನೇಮಕ
ಕರ್ನಾಟಕದ ಕರಾವಳಿ ( karavali ) ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ : – ನಮ್ಮ ಅವಧಿಯಲ್ಲಿ ಕಮಿಷನ್ ಇದ್ದಿದ್ದೇ ಹೌದಾದರೆ ಸಿಎಂ ನ್ಯಾಯಾಂಗ ತನಿಖೆ ಮಾಡಿಸಲಿ – ಡಿ.ಕೆ ಶಿವಕುಮಾರ್