ಎಂಗೇಜ್ ಆದ ವೈಷ್ಣವಿ ಗೌಡ…? ವೈರಲ್ ಆದ ಫೋಟೋ

ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಸಾಕಷ್ಟು ಫೇಮಸ್ ಆದವರು ನಟಿ ವೈಷ್ಣವಿ ಗೌಡ ಅವರಿಗೆ ಈ ಧಾರಾವಾಹಿ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತ್ತು.

ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಸಾಕಷ್ಟು ಫೇಮಸ್ ಆದವರು ನಟಿ ವೈಷ್ಣವಿ ಗೌಡ ( Vaishnavi Gowda ) ಅವರಿಗೆ ಈ ಧಾರಾವಾಹಿ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತ್ತು. ಆ ಬಳಿಕ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ಕ್ಕೆ ಕಾಲಿಟ್ಟರು. ಕೊನೆಯ ಹಂತದವರೆಗೂ ಅವರು ಆಟ ಆಡಿದರು.

ಆದರೆ, ಗೆಲುವು ಸಿಗಲಿಲ್ಲ. ಅವರ ನಗು, ಹಾಸ್ಯಗಳೆಲ್ಲವೂ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಕೆಲ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಇತ್ತೀಚೆಗೆ ಅವರು ‘ಲಕ್ಷಣ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದರು. ಹೀಗಿರುವಾಗಲೇ ಫೋಟೋ ಒಂದು ವೈರಲ್ ಆಗಿದೆ. ‘ಬಿಗ್ ಬಾಸ್’ಗೆ ಬಂದಾಗ ವೈಷ್ಣವಿ ಗೌಡ ಅವರು ಮದುವೆ ಬಗ್ಗೆ ಸಾಕಷ್ಟು ಮಾತನಾಡಿದ್ದರು. ಇದನ್ನೂ ಓದಿ : – ಅಪ್ರಾಪ್ತ ಬಾಲಕಿಯ ರೇಪ್ – ಮುಸ್ಲಿಂ ಧರ್ಮಕ್ಕೆ ಮತಾಂತರವಾದ್ರೆ ಮದುವೆ ಆಗ್ತೇನೆ…!

ತಮಗೆ ಮದುವೆ ಆಗಬೇಕು ಎನ್ನುವ ಆಸೆ ಇದೆ ಎಂದು ಅನೇಕ ಬಾರಿ ಹೇಳಿಕೊಂಡಿದ್ದರು. ಈ ಕಾರಣಕ್ಕೆ ಬಿಗ್ ಬಾಸ್ನಿಂದ ಹೊರ ಬಂದ ನಂತರದಲ್ಲಿ ಮದುವೆ ಆಫರ್ ಗಳು ಬರೋಕೆ ಆರಂಭ ಆಗಿದ್ದವು. ಈ ಬಗ್ಗೆ ಅವರು ಲೈವ್ನಲ್ಲಿ ಹೇಳಿಕೊಂಡಿದ್ದೂ ಇದೆ. ‘ಕನ್ನಡ ಬಿಗ್ ಬಾಸ್ ಸೀಸನ್ 8’ ಪೂರ್ಣಗೊಂಡು ಒಂದು ವರ್ಷದ ಬಳಿಕ ಅವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ : –  ಕೃಷಿ ಸಚಿವ ಬಿಸಿ ಪಾಟೀಲ್ ಗೆ ಮಂಡಿ ಶಸ್ತ್ರ ಚಿಕಿತ್ಸೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!