ಕೊಡಗು (kodagu) ಜಿಲ್ಲೆಯ ಹಲವೆಡೆ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.
ಬೆಳಗ್ಗೆ 7.45ರ ಸುಮಾರಿಗೆ ಮಡಿಕೇರಿ ತಾಲೂಕಿನ ಕರಿಕೆ, ಪೆರಾಜೆ, ಅರವತ್ತೊಕ್ಲು, ಸಂಪಾಜೆ ಮತ್ತು ಕಲ್ಲುಗುಂಡಿ ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಮನೆಗಳ ಪಾತ್ರೆಗಳು ಕಿಟಕಿಗಳು ಅಲ್ಲಾಡಿದ ಅನುಭವಾಗಿದೆ.
ಅಲ್ಲದೇ ಭಾಗಮಂಡಲ ನಾಪೋಕ್ಲು ಕರ್ಣಗೇರಿಯಲ್ಲೂ ಭೂಮಿ ಕಂಪಿಸಿದೆ. ಸುಳ್ಯ ಪೇಟೆಯಲ್ಲೂ ಭೂಕಂಪನ ಅನುಭವವಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸುಮಾರು 4-5 ಸೆಕೆಂಡ್ ಕಾಲ ಕಂಪನ ಆಗಿದೆ.
ಇದನ್ನೂ ಓದಿ :- ಅಗ್ನಿವೀರರ ನಿವೃತ್ತಿ ವಯಸ್ಸು 65 ವರ್ಷಕ್ಕೆ ವಿಸ್ತರಿಸಬೇಕು – ಮಮತಾ ಬ್ಯಾನರ್ಜಿ