CBI ನಿಂದ ಹೊಸ ನೋಟಿಸ್ (Notice) ಕೊಟ್ಟಿದ್ದಾರೆ. ಚಾರ್ಜ್ ಶೀಟ್ ಆದ ಮೇಲೆ ಕೋರ್ಟ್ ಗೆ ಹೋಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (DK.Shivkumar) ಹೇಳಿದ್ದಾರೆ.
ಗೃಹ ಕಚೇರಿಯಲ್ಲಿ ಮಾತನಾಡಿದ ಅವರು ನಮ್ಮ ನಾಯಕರನ್ನ ED ಇನ್ನೂ ವಿಚಾರಣೆ ನಡೆಸ್ತಿದೆ. ಅವರು ಪ್ರಶ್ನೆ ಮಾಡಲಿ, ತೊಂದರೆಯಿಲ್ಲ. ಐದು ದಿನ ವಿಚಾರಣೆ ಮಾಡುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ. ನನಗೆ 3 ತಿಂಗಳ ಹಿಂದೆಯೇ ಚಾರ್ಜ್ ಶೀಟ್ ಹಾಕಬೇಕಿತ್ತು.
ಆದರೆ, ಈಗ ಚಾರ್ಜ್ ಶೀಟ್ ಹಾಕಿದ್ದಾರೆ. ಐದು ಜನರಿಗೆ ಸಮನ್ಸ್ ಕೊಟ್ಟಿದ್ದಾರೆ. ಕಾನೂನು ಇದೆ, ಅದನ್ನ ಗೌರವಿಸೋಣ. ಜುಲೈ 1 ರಂದು ನ್ಯಾಯಾಲಯಕ್ಕೆ ಹಾಜರಾಗ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ : – ಮೋದಿ ವಿಷಕಂಠನಂತೆ 19 ವರ್ಷ ಮೌನವಾಗಿ ನೋವು ನುಂಗಿದ್ದಾರೆ – ಅಮಿತ್ ಶಾ…!