Cinema

‘ಬ್ಯಾಟೆಮರ’ ಕಥಾಸಂಕಲನ ಲೋಕಾರ್ಪ ಣೆಗೊಳಿಸಿದ ರಾಜ್ ಬಿ.ಶೆಟ್ಟಿ

ಬರಹಗಾರನಾಗಿ ಗುರುತಿಸಿಕೊಂಡಿರುವ ಎ ಎಸ್ ಜಿ ಮೊದಲ ಕಥಾಸಂಕಲನವನ್ನು ಕೋಟಿಗಾನಹಳ್ಳಿ ರಾಮಯ್ಯ ಮತ್ತು ರಾಜ್ ಬಿ ಶೆಟ್ಟಿ ಅವರು ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಕಲಾಗ್ರಾಮದ ಸಂಭಾಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ನಟರಾಜ್ ಬುದಾಳ್, ಜಯತೀರ್ಥ ಹಾಗೂ ದಯಾ ಗಂಗನಘಟ್ಟ ವಿಶೇಷ ಅತಿಥಿಗಳಾಗಿ ಆಗಮಿಸಿ ಎ ಎಸ್ ಜಿ ಪುಸ್ತಕ ಪ್ರೀತಿಗೆ ಜೊತೆಯಾದರು.

ಮೂಲತಃ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಆಲದಹಳ್ಳಿಯವರಾದ ಎ ಎಸ್ ಜಿ ತನ್ನ ಸುತ್ತಮುತ್ತಲಿನ ಕತೆಗಳನ್ನು ಅಕ್ಷರ ರೂಪಕ್ಕಿಳಿಸಿ ತಯಾರಿಸಿರುವ ಗ್ರಾಮೀಣ ಸೊಗಡಿನ ಕಥೆಗಳ ಗುಚ್ಛವೇ ಬ್ಯಾಟೆಮರ. ಎ ಎಸ್ ಜಿ ಅವರ ಈ ಪುಸ್ತಕ ಪ್ರೀತಿಗೆ ಕಾರಣ ಸಿನಿಮಾರಂಗ..

ಸಿನಿಮಾವನ್ನೇ ಉಸಿರಾಗಿಸಿಕೊಂಡು ಸಿನಿಮಾಕ್ಕಾಗಿ ತುಡಿಯುತ್ತಿರುವ ಎ ಎಸ್ ಜಿ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಡುವ ಹುಮ್ಮಸ್ಸಿನಲ್ಲಿದ್ದಾರೆ. ಅದಕ್ಕಾಗಿ ತಮ್ಮಲ್ಲಿನ ಪುಸ್ತಕ ಪ್ರೀತಿಯನ್ನು ತೆರೆದಿಟ್ಟಿದ್ದಾರೆ. ನನ್ನ ಪ್ರಕಾರ, ಸಾಹೇಬ, ತೂತುಮಡಿಕೆ, ಒಂದ್ ಕಥೆ ಹೇಳ್ಲಾ ಸಿನಿಮಾಗಳಿಗೆ ಬರಹಗಾರರಾಗಿ ಕೆಲಸ ಮಾಡಿರುವ ಎ ಎಸ್ ಜಿ ಡೈರೆಕ್ಟರ್ ಕ್ಯಾಪ್ ತೊಡ್ತಿದ್ದಾರೆ. ಈಗಾಗಲೇ ಕಥೆ ಸಿದ್ಧ ಮಾಡಿಕೊಂಡು ನಿರ್ಮಾಪಕರ ಹುಡುಕಾಟದಲ್ಲಿ ತೊಡಗಿದ್ದಾರೆ. ಕಳೆದ ಏಳೆಂಟು ವರ್ಷಗಳಿಂದ ಬರಹಗಾರನಾಗಿ ಅನುಭವವಿರುವ ಎ ಎಸ್ ಜಿ ತಮ್ಮ ಇಷ್ಟು ವರ್ಷದ ಪರಿಶ್ರಮವೆಲ್ಲವನ್ನೂ ಹಾಕಿ ಸಿನಿಮಾ ನಿರ್ದೇಶನಕ್ಕಿಳಿಯುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!