ಉಡುಪಿ :ಕನ್ನಡ ಚಿತ್ರರಂಗವನ್ನು ಉತ್ತುಂಗಕ್ಕೇರಿಸಿದ ಸಿನಿಮಾ ಸಾಲಿನಲ್ಲಿ ಕಾಂತಾರ ಸಿನಿಮಾ ಮೊದಲ ಸಾಲಿನಲ್ಲಿದೆ. ಕಾಂತಾರ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿತ್ತು. ಭಾರೀ ಜನ ಮನ್ನಣೆಯನ್ನು ಪಡೆದುಕೊಂಡಿತು ಈ ಬೆನ್ನಲ್ಲೆ ಸಿನಿ ರಸಿಕರು ಕಾಂತಾರ 2 ಸಿನಿಮಾಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಕಾಂತಾರ 2 ಚಿತ್ರ ನೋಡೋಕ್ಕೆ ಕಾಯುತ್ತಿದ್ದವರಿಗೆ ಗುಡ್ ನ್ಯೂಸ್ ಇದಾಗಿದ್ದು, ‘ಕಾಂತಾರ 2’ ಚಿತ್ರಕ್ಕೆ ಇಂದು ಮುಹೂರ್ತ ನೆರವೇರಲಿದೆ.
ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ʻಕಾಂತಾರ 2’ ತಂಡ ಕ್ಯಾಮೆರಾಗೆ ಚಾಲನೆ ನೀಡುವ ಮೂಲಕ ಮುಹೂರ್ತ ನೆರವೇರಲಿದೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ ಕಾಂತಾರ ಸಿನಿಮಾ ಭೆರ್ಜರಿ ಸಕ್ಸಸ್ ಬೆನ್ನಲ್ಲೆ ಇದೀಗ ‘ಕಾಂತಾರ 2’ ತಂಡ ಕ್ಯಾಮೆರಾಗೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ಮೊದಲಾದವರು ಭಾಗಿಯಾಗಿದ್ದಾರೆ.