ಬೆಂಗಳೂರು: ಬೆಂಗಳೂರಿನ ಯಲಚೇನಹಳ್ಳಿ ಮೆಟ್ರೋ ಸ್ಟೇಷನ್ ಸಮೀಪ ತಡರಾತ್ರಿಯಲ್ಲಿ ಬೃಹತ್ ಕ್ರೇನ್ ಹೊತ್ತಿ ಉರಿದಿರುವ ಘಟನೆ ಜರುಗಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಹರಸಾಹಸ ಪಟ್ಟು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಕ್ರೇನ್ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ಹಾಗೂ ಸಿಬ್ಬಂದಿ ಕೆಳಗೆ ಜಿಗಿದು ಪ್ರಾಣ ಕಾಪಾಡಿಕೊಂಡಿದ್ದಾರೆ.
ವರ್ತೂರಿನಿಂದ ಬಿಡದಿಗೆ ಹೋಗುತ್ತಿದ್ದ ವೇಳೆ ಕ್ರೇನ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದರಿಂದ ಗಾಬರಿಯಾದ ಚಾಲಕ ಬೆಂಕಿ ನಂದಿಸಲು ವಾಹನವನ್ನು ನಿಧಾನಗೊಳಿಸಿದ್ದ, ಆದರೆ ನೋಡು ನೋಡುತ್ತಿದ್ದಂತೆ ಬೆಂಕಿ ದಗ ದಗನೇ ಹೊತ್ತಿ ಉರಿದು ಜ್ವಾಲೆ ಇಡೀ ಕ್ರೇನ್ ಆವರಿಸಿದೆ. ಕೂಡಲೇ ಕ್ರೇನ್ ನಿಂದ ಹೊರ ಜಿಗಿದು ಚಾಲಕ ಹಾಗೂ ಇಬ್ಬರು ಸಿಬ್ಬಂದಿ ಪ್ರಾಣ ಉಳಿಸಿಕೊಂಡಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿದೆ ಎನ್ನಲಾಗಿದೆ.