Crime News

ಓದಿಗೆ ಗಮನ ಕೊಡು ಎಂದಿದ್ದಕ್ಕೇ ಯುವಕ ಆತ್ಮಹತ್ಯೆ..!

ಧಾರವಾಡ : ಕ್ರೀಡೆಯ ಬಗ್ಗೆ ಆಸಕ್ತಿ ಕಡಿಮೆ ಮಾಡಿ ಓದಿನ ಕಡೆ ಗಮನಕೊಡು ಎಂದು ಹೆತ್ತವರು ಸಲಹೆ ನೀಡಿದ್ದನ್ನೇ ದೊಡ್ಡ ವಿಚಾರ ಮಾಡಿ ನೊಂದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಧಾರವಾಡದ ಸಾಧನ ಕೇರಿಯ ನಿವಾಸಿ ಚೇತನ್‌ ತೊಂಡಿಹಾಳ ಎಂಬಾತನೇ ಪ್ರಾಣ ಕಳೆದುಕೊಂಡವನು. ಅವನು ಧಾರವಾಡದ ಕೆಲಗೇರಿ ಕೆರೆಗೆ ಜಿಗಿದು ಮೃತಪಟ್ಟಿದ್ದಾನೆ.

ಪುಟ್ಬಾಲ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಯುವಕ ಎಲ್ಲಾ ಹೊತ್ತಿನಲ್ಲೂ ಆಟದ ಮೇಲೆಯೇ ಗಮನ ಕೊಡುತ್ತಿದ್ದ. ಆದರೆ, ಪಾಠದ ಕಡೆಗೆ ಗಮನ ಕೊಡುತ್ತಿರಲಿಲ್ಲ ಎನ್ನುವ ಕೊರಗು ತಂದೆಗಿತ್ತು. ಹಾಗಾಗಿ ಅವರು ಆಟ ಬಿಟ್ಟು ಸ್ವಲ್ಪ ಓದಿನ ಕಡೆಗೆ ಗಮನ ಕೊಡು ಎಂದು ಬುದ್ಧಿವಾದ ಹೇಳಿದ್ದರು. ಆದರೆ, ಚೇತನ್‌ ಇಷ್ಟಕ್ಕೇ ನೊಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದ.

ಸೋಮವಾರ ಸಂಜೆ ಯಾವುದೇ ಮಾತು ಹೇಳದೆ ಮನೆಯಿಂದ ಕಾಣೆಯಾಗಿದ್ದ ಚೇತನ್‌ಗಾಗಿ ಮನೆಯವರು ಭಾರಿ ಹುಡುಕಾಟ ನಡೆಸಿದ್ದರು. ಆತನ ಶವ ಬುಧವಾರ ಬೆಳಗ್ಗೆ ಕೆಲಗೇರಿ ಕೆರೆಯಲ್ಲಿ ಪತ್ತೆಯಾಗಿದೆ. ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!