![](https://rajnewskannada.in/wp-content/uploads/2021/03/corona-1.jpg)
ಕೊರೊನಾ 2ನೇ ಅಲೆ ಈಗಷ್ಟೇ ಆರಂಭವಾಗಿದ್ದು, ಮುಂದಿನ 15 ದಿನ ಅತ್ಯಂತ ಅಪಾಯಕಾರಿಯಾಗಿದ್ದು, ಕಠಿಣ ಕ್ರಮ ಅನಿವಾರ್ಯ ಎಂದು ಕೊರೊನಾ ತಾಂತ್ರಿಕ ತಜ್ಞರ ಸಲಹಾ ಸಮಿತಿ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಭಾನುವಾರ ಆರೋಗ್ಯ ಸಚಿವ ಕೆ. ಸುಧಾಕರ್ ನೇತೃತ್ವದಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಭೆಯಲ್ಲಿ ಸರಕಾರಕ್ಕೆ ಕನಿಷ್ಠ 10 ದಿನ ಲಾಕ್ ಡೌನ್ ವಿಧಿಸದೇ ಇದ್ದರೆ ಅಪಾಯ ತಪ್ಪಿದ್ದಲ್ಲ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಕೊರೊನಾ 2ನೇ ಅಲೆಯ ಆರಂಭಿಕ ಅಲೆ ಬಂದಿದ್ದು, ಇದು ಕಡಿಮೆ ಆಗಲು 90ರಿಂದ 120 ದಿನ ಬೇಕು. ಈ ಸಮಯದಲ್ಲಿ ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಮಹಾರಾಷ್ಟ್ರ ಪರಿಸ್ಥಿತಿ ರಾಜ್ಯಕ್ಕೂ ಬರಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಕಠಿಣ ಕ್ರಮ ಜಾರಿ ಮಾಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳು ಅಪಾಯ ತಪ್ಪಿದ್ದಲ್ಲ. 15 ದಿನ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.
ತಜ್ಞರ ಸಲಹೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ತಿಳಿಸಿದ್ದಾರೆ.