ಕೋವಿಡ್ ನಿಂದ 577 ಮಕ್ಕಳು ಅನಾಥ: ಕೇಂದ್ರ ಸಚಿವೆ ಸ್ಮೃತಿ ಇರಾನಿ

ತಂದೆ-ತಾಯಿಯನ್ನು ಕಳೆದುಕೊಂಡು 577 ಮಕ್ಕಳು ಅನಾಥರಾಗಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೇರಿ ದೇಶಾದ್ಯಂತ ಒಟ್ಟಾರೆ 577 ಮಕ್ಕಳು ಅನಾಥರಾಗಿದ್ದು, ಕೋವಿಡ್ ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ರಕ್ಷಣೆ ಹಾಗೂ ಬೆಂಬಲಕ್ಕೆ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ಏಪ್ರಿಲ್ 1ರಿಂದ ಇಲ್ಲಿಯವರೆಗೆ ತಂದೆ-ತಾಯಿಯನ್ನು ಕಳೆದುಕೊಂಡು 577 ಅನಾಥರಾಗಿದ್ದು, ಅಂತಹ ಮಕ್ಕಳ ಯೋಗಕ್ಷೇಮದ ಮೇಲೆ ನಿಗಾ ವಹಿಸುವಂತೆ ಸ್ಥಳೀಯ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಮಕ್ಕಳ ಕ್ಷೇಮಾಭಿವೃದ್ಧಿಗೆ ಸರಕಾರದ ಬಳಿ ಹಣದ ಕೊರತೆ ಇಲ್ಲ. ಈ ಕುರಿತು ರಾಜ್ಯ ಹಾಗೂ ಜಿಲ್ಲಾಡಳಿತಗಳ ಜೊತೆ ಕೇಂದ್ರ ಸಂಪರ್ಕದಲ್ಲಿದ್ದು, ನಿರಂತರ ಮಾಹಿತಿ ಪಡೆಯಲಾಗುತ್ತಿದೆ ಎಂದು ಸ್ಮೃತಿ ಇರಾನಿ ಸ್ಪಷ್ಪಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!