ಬಿಜೆಪಿ (BJP) ಗೆ ಸೇರ್ಪಡೆಗೊಳ್ಳಲು 60 ರೌಡಿಗಳು ಮುಂದಾಗಿದ್ದಾರೆ ಎಂದು ಆರೋಪ ಮಾಡಿರುವ ಕಾಂಗ್ರೆಸ್ (Congress) ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೆಪಿಸಿಸಿ ಕಚೇರಿಯಲ್ಲಿ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ (M.Lakshman) , ಮೊದಲ ಹಂತದಲ್ಲಿ ಈಗಾಗಲೇ 36 ರೌಡಿಶೀಟರ್ ಗಳು ಬಿಜೆಪಿ ಸೇರ್ಪಡೆ ಆಗಿದ್ದಾರೆ.
24 ರೌಡಿಗಳ ಸೇರ್ಪಡೆ ಬಾಕಿ ಇದೆ. ರಾಜ್ಯದಲ್ಲಿ ಒಟ್ಟು 150 ರೌಡಿಗಳನ್ನು ಸೇರಿಸಿಕೊಳ್ಳಲು ಬಿಜೆಪಿಯವರು ಪಟ್ಟಿ ಮಾಡಿದ್ದಾರೆ ಎಂದು ಆರೋಪ ಮಾಡಿದರು. 36 ರೌಡಿಗಳ ಪೈಕಿ ಸೈಲೆಂಟ್ ಸುನೀಲ್ (Silent sunil) ಹಾಗೂ 9 ಇತರರು. ವಿಲ್ಸನ್ ಗಾರ್ಡನ್ ನಾಗ (Wilson garden naga) ಹಾಗೂ 6 ಇತರರು, ನಾಗಮಂಗಲದ ಫೈಟರ್ ರವಿ (Fighter ravi) ಹಾಗೂ 5 ಇತರರು, ಬೆತ್ತನಗೆರೆ ಶಂಕರ ಹಾಗೂ 8 ಇತರರು, ಈತ ಹೆಸರು ಬದಲಾವಣೆ ಮಾಡಿಕೊಂಡು ನಲ್ಲೂರು ಶಂಕರೇಗೌಡ ಎಂದು ಪಕ್ಷ ಸೇರ್ಪಡೆ ಆಗಿದ್ದಾನೆ.
ಮೈಸೂರು ಬಿಜೆಪಿ ಕಚೇರಿಯಲ್ಲಿ ಸಂಸದ ಪ್ರತಾಪ್ ಸಿಂಹ (Pratap simha) ಹಾಗೂ ಸಿದ್ದರಾಜು ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ ಆಗಿದ್ದಾನೆ. ಒಂಟೆ ರೋಹಿತ್ ಹಾಗೂ ಇತರರು, ಕುಣಿಗಲ್ ಗಿರಿ ಈತ ಜೈಲಿನಲ್ಲಿದ್ದು, ಅಲ್ಲಿಂದಲೇ ಬಿಜೆಪಿ ಸೇರ್ಪಡೆ ಆಗಿದ್ದಾರೆ. “ನಮಗೆ ಅಮಿತ್ ಶಾ ಹಾಗೂ ಆರ್ ಎಸ್ಎಸ್ ಕಡೆಯಿಂದ ನಿರ್ದೇಶನವಿದೆ. ಇದನ್ನೂ ಓದಿ : – ಕೊರೊನಾ ವೈರಸ್ ವುಹಾನ್ ಲ್ಯಾಬ್ ನಿಂದಲೇ ಸೋರಿಕೆ ….!
ಈ ವಿಚಾರವಾಗಿ ಗುಜರಾತ್ ಹಾಗೂ ಉತ್ತರ ಪ್ರದೇಶದಲ್ಲಿ ಪ್ರಯೋಗ ಮಾಡಿದ್ದಾರೆ. ಎಲ್ಲಿ ಮತ ಸಿಗುವುದಿಲ್ಲವೋ ಅಲ್ಲಿ ರೌಡಿಗಳನ್ನು ಕಳಿಸಿ ಪ್ರಚಾರ ಮಾಡಿಸಿ ಯಶಸ್ವಿಯಾಗಿದ್ದೇವೆ. ಈಗ ಅದನ್ನು ಕರ್ನಾಟಕದಲ್ಲಿ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ ಎಂದು ತಿಳಿಸಿದ್ರು.
ಇದನ್ನೂ ಓದಿ : – ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತ ಮಾಡಿಲ್ಲ – ಕೋಟಾ ಶ್ರೀನಿವಾಸ್ ಪೂಜಾರಿ