ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಪಾರಿವಾಳವನ್ನು ಹಿಡಿಯಲು ಹೋಗಿ ಕರೆಂಟ್ ಶಾಕ್ ಗೆ ಒಳಗಾಗಿ ಆಸ್ಪತ್ರೆ ಸೇರಿದ್ದ ಮತ್ತೊಬ್ಬ ಬಾಲಕ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಚಂದ್ರು ( CHANDRU ) (13) ಮೃತಪಟ್ಟ ಬಾಲಕ. ಈತನಿಗೂ ಶೇ.74 ರಷ್ಟು ದೇಹ ಸುಟ್ಟು ಗಾಯಗಳಾಗಿತ್ತು.
ಕಳೆದ 7 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಸದ್ಯ ಬಾಲಕನ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಇಂದು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗುವುದು.
ಇದನ್ನು ಓದಿ : – ಕಾಂಗ್ರೆಸ್ ನವರು ದಲಿತರನ್ನ ಭಿಕ್ಷುಕರನ್ನಾಗಿ ಮಾಡಿದ್ದಾರೆ – ಆರಗ ಜ್ಞಾನೇಂದ್ರ