ಕೋಲಾರದಲ್ಲಿ ವಿದ್ಯಾರ್ಥಿನಿಯರಿಂದ ಇ.ಟಿ.ಸಿ.ಎಂ ಆಸ್ಪತ್ರೆ ಲೆಕ್ಕಾಧಿಕಾರಿಯ ವಿರುದ್ದ ಸುಳ್ಳು ಮೊಕದ್ದಮೆ ದಾಖಲು ಮಾಡಿದ್ದ ಹಿನ್ನೆಲೆಯಲ್ಲಿ ಮೆಥೋಡಿಸ್ಟ್ ಚರ್ಚ್ ಪಾದ್ರಿ ರೆವರಂಟ್ ಶಾಂತಕುಮಾರ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಆಗಸ್ಟ್-30 ರಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಲೆಕ್ಕಾಧಿಕಾರಿ ಜಾನ್ಸನ್ ಕುಂದರ್ ವಿರುದ್ದ ನಕಲಿ ವಿದ್ಯಾರ್ಥಿನಿಯರಿಂದ ಸುಳ್ಳು ದೂರು ನೀಡಲಾಗಿತ್ತು. ನ್ಯಾಯಾಧೀಶರ ಎದುರು ನಕಲಿ ವಿದ್ಯಾರ್ಥಿನಿಯರಿಂದ ಹೇಳಿಕೆ ದಾಖಲು ಮಾಡಿಸಲಾಗಿತ್ತು. ಈ ಸಂಬಂಧ ಲೆಕ್ಕಾಧಿಕಾರಿ ಜಾನ್ಸನ್ ಕುಂದರ್ ಪತ್ನಿ ಸವಿತಾಜಾನ್ ಎಸ್ಪಿ ದೇವರಾಜ್ ಅವರಿಗೆ ದೂರು ನೀಡಿದ್ದರು. ಇದನ್ನೂ ಓದಿ : – ಇಂದು ಬಾಗೇಪಲ್ಲಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮನ – CPIM ಶಕ್ತಿ ಪ್ರದರ್ಶನಕ್ಕೆ ಸಜ್ಜು
ವಿಚಾರಣೆ ನಡೆಸಿದ ಪೊಲೀಸರು ಸುಳ್ಳು ದೂರು ನೀಡಿರುವುದು ಸಾಬೀತಾದ ಹಿನ್ನೆಲೆಯಲ್ಲಿಇಬ್ಬರು ವಿದ್ಯಾರ್ಥಿನಿಯರಾದ ಜನಿಫರ್ ಹಾಗೂ ಮಂಜು, ಹಾಸ್ಟೆಲ್ ವಾರ್ಡನ್ ಶೀಲಾ, ಕುಮ್ಮಕ್ಕು ನೀಡಿದ್ದ ಮೆಥೋಡಿಸ್ಟ್ ಚರ್ಚ್ ಪಾದ್ರಿ ರೆವರೆಂಟ್ ಶಾಂತಕುಮಾರ್ ನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : – ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾದ ಕೇರಳ ಸಿಎಂ ಪಿಣರಾಯಿ ವಿಜಯನ್