ದೆಹಲಿ ಹತ್ಯೆ ಮಾದರಿಯಲ್ಲಿ ತಂದೆಯನ್ನೇ ಕೊಂದು ದೇಹವನ್ನು 30 ತುಂಡು ಮಾಡಿ ಬೋರ್ ವೆಲ್ ಗೆ ಹಾಕಿದ ಮಗ…!

ಶ್ರದ್ಧಾ ಕೊಲೆ ನಂತರ ದೆಹಲಿಯಲ್ಲಿ ಅಂತಹದ್ದೇ ಒಂದು ಘಟನೆ ನಡೆದಿತ್ತು. ಪಾಂಡವನಗರದ ಮಹಿಳೆ ಮತ್ತು ಆಕೆಯ ಮಗ ಸೇರಿಕೊಂಡು ಪತಿಯನ್ನು ಕೊಂದು ಫ್ರಿಡ್ಜ್ ನಲ್ಲಿ ಇಟ್ಟಿದ್ದರು. ಇಂತಹದ್ದೇ ಒಂದು ಘಟನೆ ಕರ್ನಾಟಕದಲ್ಲೂ ನಡೆದಿದೆ. ಬಾಗಲಕೋಟೆ ( BAGALOKOTE ) ಜಿಲ್ಲೆಯ ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ಪಾಪಿ ಮಗನೊಬ್ಬ ತನ್ನ ಜನನಕ್ಕೆ ಕಾರಣವಾಗಿದ್ದ ತಂದೆಯನ್ನೇ ಕೊಂದು ದೇಹವನ್ನು ತುಂಡು ತುಂಡು ಮಾಡಿದ್ದಾನೆ.

ಶ್ರದ್ಧಾ ಕೊಲೆ ನಂತರ ದೆಹಲಿಯಲ್ಲಿ ಅಂತಹದ್ದೇ ಒಂದು ಘಟನೆ ನಡೆದಿತ್ತು. ಪಾಂಡವನಗರದ ಮಹಿಳೆ ಮತ್ತು ಆಕೆಯ ಮಗ ಸೇರಿಕೊಂಡು ಪತಿಯನ್ನು ಕೊಂದು ಫ್ರಿಡ್ಜ್ ನಲ್ಲಿ ಇಟ್ಟಿದ್ದರು. ಇಂತಹದ್ದೇ ಒಂದು ಘಟನೆ ಕರ್ನಾಟಕದಲ್ಲೂ ನಡೆದಿದೆ. ಬಾಗಲಕೋಟೆ ( BAGALOKOTE ) ಜಿಲ್ಲೆಯ ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ಪಾಪಿ ಮಗನೊಬ್ಬ ತನ್ನ ಜನನಕ್ಕೆ ಕಾರಣವಾಗಿದ್ದ ತಂದೆಯನ್ನೇ ಕೊಂದು ದೇಹವನ್ನು ತುಂಡು ತುಂಡು ಮಾಡಿದ್ದಾನೆ.


ಪರಶುರಾಮ ಕುಳಲಿ (54) ಎಂಬವರು ನಿತ್ಯ ಕುಡಿದು ಬಂದು ಮನೆಯಲ್ಲಿ ಮಗನಿಗೆ ಬೈಯುವುದು, ಹೊಡೆಯುವುದು ಮಾಡುತ್ತಿದ್ದನು. ಇದರಿಂದ ರೋಸಿ ಹೋಗಿದ್ದ ಮಗ ವಿಠ್ಠಲ ಕುಳಲಿ (20) ತಂದೆಯನ್ನೇ ರಾಡ್ ನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಂದಿದ್ದಾನೆ. ಈ ಘಟನೆ ಕಳೆದ ಮಂಗಳವಾರ ರಾತ್ರಿ 12ಗಂಟೆ ಸುಮಾರಿಗೆ ನಡೆದಿದೆ. ಇದನ್ನು ಓದಿ : – ಇಂದಿನಿಂದ ಬೆಂಗಳೂರಿನಲ್ಲಿ 5 ದಿನಗಳ ಕಾಲ ಜಿ-20 ಶೃಂಗಸಭೆ..!

ತಂದೆಯನ್ನು ಕೊಂದ ನಂತರ ಮೃತದೇಹವನ್ನು ಯಾರಿಗೂ ಗೊತ್ತಾಗದಂತೆ ಕೊಳವೆ ಬಾವಿಗೆ ಹಾಕಲು ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ತಮ್ಮ ಹೊಲಕ್ಕೆ ಕೊಂಡೊಯ್ಯುತ್ತಾನೆ. ತಂದೆಯ ಮೃತದೇಹವನ್ನು ಕೊಳವೆ ಬಾವಿಗೆ ಹಾಕುವಾಗ ದೇಹ ಅದರೊಳಗೆ ಹೋಗದಿದ್ದಾಗ ಮಗ ವಿಠಲ, ದೇಹವನ್ನು 30 ತುಂಡುಗಳನ್ನಾಗಿ ಮಾಡಿ ಬೋರ್ ವೆಲ್ ಗೆ ಹಾಕಿ ಮನೆಗೆ ವಾಪಸ್ ಆಗಿದ್ದಾನೆ. ಕೊಲೆಗಡುಕನ ಬಣ್ಣ ಬಯಲಾಗಿದ್ದು, ಮೃತದೇಹವನ್ನು ಹೊರತೆಗೆಯಲಾಗಿದೆ.

ಇದನ್ನು ಓದಿ : –  ಅಪ್ಪ-ಮಕ್ಕಳು, ಅಣ್ತಮ್ಮಂದಿರಿಗೆ ಟಿಕೆಟ್ ಸಿಗಲ್ಲ – ಬಸನಗೌಡ ಪಾಟೀಲ್ ಯತ್ನಾಳ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!