ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸೆಂಟ್ ಜಾನ್ ಆಸ್ಪತ್ರೆಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಭೇಟಿ ನೀಡಿ ಯುವತಿಯ ಆರೋಗ್ಯ ವಿಚಾರಣೆ ಮಾಡಿದ್ದಾರೆ.
![](https://rajnewskannada.in/wp-content/uploads/2022/04/WhatsApp-Image-2022-04-30-at-10.56.54-AM-1024x768.jpeg)
ನಂತರ ಮಾತನಾಡಿದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ಜೊತೆ ಮಾತನಾಡಿದ್ದೇನೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಅವರ ಕುಟುಂಬಸ್ಥರು ನೋವಲ್ಲಿದ್ದಾರೆ. ಸರ್ಕಾರಕ್ಕೆ ಈ ಘಟನೆಯಿಂದ ಅತೀವ ನೋವಾಗಿದೆ. ಸರ್ಕಾರದಿಂದ ವೈದ್ಯಕೀಯ ವೆಚ್ಚ ಬರಿಸುವ ಭರವಸೆ ನೀಡಲಾಗಿದೆ. ಇದನ್ನೂ ಓದಿ :- ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ – ತನ್ನ ಬಳಿಯಿದ್ದ ಮೊಬೈಲ್ ಒಡೆದು ಹಾಕಿದ ದಿವ್ಯಾ ಹಾಗರಗಿ
![](https://rajnewskannada.in/wp-content/uploads/2022/04/WhatsApp-Image-2022-04-30-at-10.56.48-AM-1024x768.jpeg)
ನಾಗರೀಕ ಸಮಾಜದಲ್ಲಿ ಹೃದಯ ಕಲುಕುವ ಘಟನೆ ಇದು. ಬಿಎಂಸಿ ಯಿಂದ ಚರ್ಮ ತಜ್ಞರ ಜೊತೆ ಸಂಪರ್ಕದಲ್ಲಿದೇವೆ. ಸರ್ಕಾರ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಇವತ್ತು, ನಾಳೆಯೊಳಗೆ ಆರೋಪಿಯನ್ನ ಬಂದಿಸುವ ಕೆಲಸ ಮಾಡಲಾಗುತ್ತೆ ಎಂದು ಹೇಳಿದ್ರು.
ಇದನ್ನೂ ಓದಿ :- PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ