ಕೇಂದ್ರ ಸರ್ಕಾರ ಗುತ್ತಿಗೆ (Central government) ಆಧಾರದ ಅಲ್ವಾವಧಿಯ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ (AGNIPATH) ದ ವಿವಿಧ ವಿನಾಯಿತಿಗಳನ್ನು ಪ್ರಶ್ನಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ (VARUNGANDHI), ಇದು ಯುವಕರಲ್ಲಿ ಹೆಚ್ಚಿನ ಅಸಮಾಧಾನವನ್ನು ಹುಟ್ಟುಹಾಕಲಿದೆ. ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಒತ್ತಾಯಿಸಿದ್ದಾರೆ.
ಈ ಸಂಬಂಧ ರಕ್ಷಣಾ ಸಚಿವ ರಾಜನಾಥ್ ಸಿಂಗ್ (RAJNATHSINGH) ಅವರಿಗೆ ಪತ್ರ ಬರೆದಿರುವ ವರುಣ್ ಗಾಂಧಿ, ಸೈನಿಕರ ನೇಮಕಾತಿ ಪ್ರಕ್ರಿಯೆಯಲ್ಲಿನ ಆಮೂಲಾಗ್ರ ಬದಲಾವಣೆಗಳ ಬಗ್ಗೆ ಯುವ ಜನತೆ ಪ್ರಶ್ನೆಗಳು ಮತ್ತು ಅನುಮಾನಗಳನ್ನು ತಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಯೋಜನೆಯಡಿಯಲ್ಲಿ ನೇಮಕಗೊಂಡ ಶೇ. 75 ರಷ್ಟು ಯುವಕರು ಪಿಂಚಣಿ (Youth pension) ಇಲ್ಲದೆ ನಾಲ್ಕು ವರ್ಷದ ನಂತರ ಸೇವೆಯಿಂದ ನಿವೃತ್ತರಾಗಲಿದ್ದಾರೆ. ಇವರು ನಾಲ್ಕು ವರ್ಷ ಸೇವೆ ಸಲ್ಲಿಸಿದ ನಂತರ ನಿರುದ್ಯೋಗಿಯಾಗುತ್ತಾರೆ. ಪ್ರತಿ ವರ್ಷ ಇಂತವರ ಸಂಖ್ಯೆ ಹೆಚ್ಚಾಗಲಿದ್ದು, ಯುವ ಜನತೆಯಲ್ಲಿ ಹೆಚ್ಚಿನ ಅಸಮಾಧಾನವನ್ನು ಹುಟ್ಟುಹಾಕುತ್ತದೆ ಎಂದಿದ್ದಾರೆ. 15 ವರ್ಷಗಳ ನಂತರ ನಿವೃತ್ತರಾಗುವ ಸಾಮಾನ್ಯ ಸೈನಿಕರನ್ನೂ ಸಹ ಕಾರ್ಪೊರೇಟ್ ವಲಯ ನೇಮಿಸಿಕೊಳ್ಳಲು ಹೆಚ್ಚಿನ ಆಸಕ್ತಿ ತೋರಿಸಲ್ಲ. ಈ ನಿವೃತ್ತ ಸೈನಿಕರ ಭವಿಷ್ಯವೇನು ಎಂದು ಕೇಳಿದ್ದಾರೆ. ಇದನ್ನೂ ಓದಿ : – AGNIPATH – ಅಗ್ನಿಪಥ ಯೋಜನೆ ವಿರೋಧಿಸಿ ಬಿಹಾರದಲ್ಲಿ ರೈಲಿಗೆ ಬೆಂಕಿ – ಪರಿಸ್ಥಿತಿ ಉದ್ವಿಗ್ನ
ನಾಲ್ಕು ವರ್ಷಗಳ ಸೇವೆಯು ಅವರ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗುತ್ತದೆ, ಮತ್ತು ಅವರು ಅದೇ ಅರ್ಹತೆ ಹೊಂದಿರುವ ಇತರರಿಗಿಂತ ಹಿರಿಯರಾಗಿರುವುದರಿಂದ ಅವರು ಬೇರೆ ಉದ್ಯೋಗ ಅಥವಾ ಹೆಚ್ಚಿನ ಶಿಕ್ಷಣವನ್ನು ಪಡೆಯುವಲ್ಲಿ ತೊಂದರೆಗಳನ್ನು ಎದುರಿಸುತ್ತಾರೆ, ಅವರು ಆರ್ಥಿಕ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ವರುಣ್ ಗಾಂಧಿ ಹೇಳಿದ್ದಾರೆ. ನಾಲ್ಕು ವರ್ಷಗಳ ನಂತರ ಕೇವಲ ಶೇ. 25 ರಷ್ಟು ಅಗ್ನಿವೀರರು ಮಾತ್ರ ಸೇವೆಯಲ್ಲಿ ಮುಂದುವರಿಯುವುದರಿಂದ, ಈ ಯೋಜನೆಯು ತರಬೇತಿ ವೆಚ್ಚವನ್ನು ವ್ಯರ್ಥ ಮಾಡುತ್ತದೆ ಮತ್ತು ರಕ್ಷಣಾ ಬಜೆಟ್ನಲ್ಲಿ ಅನಗತ್ಯ ಹೊರೆಯಾಗಿದೆ ಎಂದು ಸಿಂಗ್ಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ. ಇದನ್ನೂ ಓದಿ : – ವಿರೋಧ ಪಕ್ಷವಾಗಿರುವುದಕ್ಕೂ ಕಾಂಗ್ರೆಸ್ ನಾಲಾಯಕ್ – ನಳೀನ್ ಕುಮಾರ್ ಕಟೀಲ್ ಲೇವಡಿ