ಕ್ರೈಸ್ತ ಸಮುದಾಯದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಐವನ್​​ ಡಿಸೋಜಾ ಖಂಡನೆ

ಮಂಗಳೂರು : ಚರ್ಚ್ ಗಳಲ್ಲಿ ಕೋವಿಡ್ ಲಸಿಕೆ ಪಡೆದುಕೊಳ್ಳಬಾರದೆಂದು ಪ್ರಚಾರಪಡಿಸಲಾಗುತ್ತಿದೆ ಎಂಬ ಸಂಸದೆ ಶೋಭಾ ಕರಂದ್ಲಾಜೆಯವರ ಹೇಳಿಕೆಯು ಖಂಡನಾರ್ಹ. ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಕೋಮು ವಿಚಾರಗಳನ್ನು ಎಳೆದು ತರಲಾಗುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಚರ್ಚ್ ಗಳಲ್ಲಿ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ಅರಿವು ಮೂಡಿಸಲಾಗುತ್ತಿದೆ. 45 ವರ್ಷ ಮೇಲ್ಪಟ್ಟ ಎಲ್ಲಾ ಕ್ರೈಸ್ತ ಧರ್ಮಗುರುಗಳು ಈಗಾಗಲೇ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ನಾನೇ ಖುದ್ದಾಗಿ ಚರ್ಚ್ ಗಳಲ್ಲಿ ಲಸಿಕೆ ಶಿಬಿರವನ್ನು ಆಯೋಜಿಸಿದ್ದೇನೆ. ಆದರೆ ಶೋಭಾ ಕರಂದ್ಲಾಜೆಯವರಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಬಾರದು. ಇದನ್ನು ನಾವು ಸಹಿಸುವುದಿಲ್ಲವೆಂದು ಐವನ್ ಅವರು ಹೇಳಿದ್ದಾರೆ.

ಸಂಸದರಾಗಿ ಶೋಭಾ ಕರಂದ್ಲಾಜೆ ಅವರ ಸಾಧನೆ ಶೂನ್ಯ. ಪ್ರಸ್ತುತ ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಇದ್ದು, ಎಲ್ಲರಿಗೂ ಲಸಿಕೆಯನ್ನು ತಲುಪಿಸುವ ನಿಟ್ಟಿನಲ್ಲಿ ಅವರು ಕಾರ್ಯನಿರ್ವಹಿಸಲಿ. ಸಂಸದರು ತಮ್ಮ ಹೇಳಿಕೆಯನ್ನು ಹಿಂಪಡೆದು ತಕ್ಷಣವೇ ಕ್ರೈಸ್ತ ಸಮುದಾಯದ ಕ್ಷಮೆಯನ್ನು ಕೇಳಬೇಕೆಂದು ಅವರು ಆಗ್ರಹಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!