ಹೊಸದಾಗಿ ನೇಮಕಗೊಂಡಿರುವ ಆಂಧ್ರಪ್ರದೇಶ ಗೃಹ ಸಚಿವೆ ತನೇತಿ ವನಿತಾ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಘಟನೆಗಳ ಕುರಿತು ಹೊಸದಾಗಿ ನೇಮಕಗೊಂಡಿರುವ ಆಂಧ್ರಪ್ರದೇಶ (ANDHRA PRADESH) ಗೃಹ ಸಚಿವೆ ತನೇತಿ ವನಿತಾ (THANETHI VANITHA) ರಾಜ್ಯದಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಘಟನೆಗಳ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-05-at-6.50.56-PM.jpeg)
ಮೇ 1 ರಂದು 25 ವರ್ಷದ ಗರ್ಭಿಣಿ ಮೇಲೆ ರೈಲು ನಿಲ್ದಾಣದಲ್ಲಿ ನಡೆದ ಸಾಮೂಹಿಕ ಅತ್ಯಾಚಾರವು ಉದ್ದೇಶ ಪೂರ್ವಕವಾಗಿರಲಿಲ್ಲ. ಅನಿರೀಕ್ಷಿತ ಸಂದರ್ಭಗಳಲ್ಲಿ ಅದು ಸಂಭವಿಸಿದೆ ಎಂದು ಹೇಳಿದ್ದಾರೆ. ಇದು ತೀವ್ರ ಟೀಕೆಗೆ ಗುರಿಯಾಗಿದೆ. ಅತ್ಯಾಚಾರದ ಘಟನೆಗಳಿಗೆ ಅವರು ಮಾನಸಿಕ ಪರಿಸ್ಥಿತಿ ಮತ್ತು ಬಡತನವನ್ನು ದೂಷಿಸಿದ್ದಾರೆ. ಆರೋಪಿಗಳು ಅತ್ಯಾಚಾರ ಮಾಡುವ ಉದ್ದೇಶವನ್ನು ಹೊಂದಿಲ್ಲ. ಪುರುಷರು ಕುಡಿದು ಬಂದು ಮಹಿಳೆಯ ಬಳಿ ಬೆಲೆಬಾಳುವ ವಸ್ತುಗಳನ್ನ ದೋಚುವ ಉದ್ದೇಶದಿಂದ ದಾಳಿ ನಡೆಸಿದ್ದರು. ಆದರೆ ಅನಿರೀಕ್ಷಿತ ರೀತಿಯಲ್ಲಿ ಅತ್ಯಾಚಾರ ಸಂಭವಿಸಿದೆ ಎಂದಿದ್ದಾರೆ. ಇದನ್ನು ಓದಿ :-ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ, ನೂತನ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ