Breaking NewsHealthState News

ಆರೋಗ್ಯ ಸೇವೆ ಸುಧಾರಿಸಲು ಸರ್ಕಾರ ಮಹತ್ವದ ಹೆಜ್ಜೆ….

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿನ ಆರೋಗ್ಯ ಸೇವೆ ಸುಧಾರಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದಲ್ಲಿ ಉತ್ತಮ ಆರೋಗ್ಯ ಸೇವೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದ್ದು 108 ಆಂಬ್ಯುಲೆನ್ಸ್ ಕಿರಿಕ್​ಗೆ ಇನ್ಮುಂದೆ ಬ್ರೇಕ್ ಬೀಳಲಿದೆ. ರಾಜ್ಯದಲ್ಲಿ 108 ಆರೋಗ್ಯ ಕವಚ ಹಾಗೂ 104 ಆರೋಗ್ಯ ಸಹಾಯವಾಣಿ ಯೋಜನೆಗಳ ಉನ್ನತ್ತೀಕರಣ ಹಾಗೂ ಮಾರ್ಗದರ್ಶನಕ್ಕೆ ಸರ್ಕಾರ ಸಮಿತಿ ರಚನೆ ಮಾಡಿದೆ.

ಹಳೆಯ ಸರ್ಕಾರದ GVK ಟೆಂಡರ್​ಗೆ ನೂತನ ಸರ್ಕಾರ ಕೊಕ್ ಕೊಟ್ಟಿದೆ. 108 ಆಂಬುಲೆನ್ಸ್ ಸೇವೆಯಲ್ಲಿ ಮಹತ್ವದ ಬದಲಾವಣೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಡಾ. ಜಿ ಗುರುರಾಜ್, ನಿಮ್ಹಾನ್ಸ್ ಪ್ರಭಾರ ನಿರ್ದೇಶಕರು ಹಾಗೂ ಐಐಐಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ಈ ಮೂಲಕ ಆರೋಗ್ಯ ಸೇವೆಗಳ ಟೆಂಡರ್ ನ್ಯೂನತೆ ಲೋಪದೋಷ ಅಧ್ಯಯನಕ್ಕೆ ಮುಂದಾಗಿದೆ. ಟೆಂಡರ್ ನ್ಯೂನತೆ ಲೋಪದೋಷ ಅಧ್ಯಯನ ಹಾಗೂ ಸಲಹೆ ನೀಡಲು ತಜ್ಞರ ಸಲಹಾ ಸಮಿತಿ ರಚನೆ ಮಾಡಲಾಗಿದ್ದು GVK ಆಂಬುಲೆನ್ಸ್ ಸೇವೆಗೆ ಬಿಗ್ ಶಾಕ್ ಕೊಟ್ಟಂತಾಗಿದೆ.

GVK ಸಂಸ್ಥೆಯ ವಿರುದ್ಧ ಸಾಲು ಸಾಲು ಆರೋಪ ಹಾಗೂ ದೂರು ಬಂದ ಹಿನ್ನಲೆ ಸರ್ಕಾರ ಜಿವಿಕೆ ಟೆಂಡರ್​ಗೆ ಕೊಕ್ ಕೊಟ್ಟಿದೆ. ಕಳೆದ ಮೂರು ತಿಂಗಳ ಹಿಂದೆ ಆರೋಗ್ಯ ಕವಚ ಅಡಿಯಲ್ಲಿನ 108 ಆಂಬುಲೆನ್ಸ್ ಸೇವೆಗೆ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ನಲ್ಲಿಯೂ ಜಿವಿಕೆ ತೆರೆ ಹಿಂದಿನಿಂದ ಭಾಗವಹಿಸಿತ್ತು. ಆದ್ರೆ ಈಗ ಸರ್ಕಾರ ಟೆಂಡರ್ ಪ್ರಕ್ರಿಯೇ ಕೈ ಬಿಟ್ಟಿದೆ. ಟೆಂಡರ್ ಪ್ರಕ್ರಿಯೆ ಖರೀದಿಯಲ್ಲಿನ ವಿಧಾನ, ಟೆಂಡರ್ ಪ್ಲೋಟೀಂಗ್ ನಲ್ಲಿನ ನ್ಯೂನತೆ, ಆಕ್ಷಪಣೆಗಳು, ತಾಂತ್ರಿಕ ದೋಷ, ಪರಿಶೀಲಿಸಿ ಉತ್ತಮ ಸೇವೆ ನೀಡಲು ಸಮಿತಿ ರಚನೆ ಮಾಡಲಾಗಿದೆ. ಉತ್ತಮ ಆರೋಗ್ಯ ಸೇವೆಗೆ ಯಾವ ರೀತಿಯ ಸೌಲಭ್ಯ? ಏನೆಲ್ಲ ತಂತ್ರಜ್ಞಾನ ಇರಬೇಕು? ಯಾವೆಲ್ಲ ಮಾರ್ಗಸೂಚಿ ಸೌಲಭ್ಯ ಅಳವಡಿಸಿಕೊಂಡಿರಬೇಕು? ಈ ಎಲ್ಲ ಮಾನದಂಡಗಳ ಆಧಾರದ ಮೇಲೆ ಸಲಹೆ ಹಾಗೂ ವರದಿ ನೀಡಲು ತಜ್ಞರ ಸಲಹಾ ಸಮಿತಿ ರಚನೆ ಮಾಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!