ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ. ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ಮಾಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್ ನಲ್ಲಿ ನಡೆದಿದೆ.
![](https://rajnewskannada.in/wp-content/uploads/2022/05/ರರರರ-1.png)
ಇತ್ತೀಚೆಗಷ್ಟೇ ಯುವತಿ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ಮಾಡಿ ವಿಕೃತಿ ಮೆರೆದಿದ್ದ. ಇದಿನ್ನೂ ಮಾಸದೇ ಹಾಗೇ ಉಳಿದಿರುವಾಗಲೇ ಮತ್ತೊಂದು ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ತನ್ನ ಸ್ನೇಹಿತನಿಗೆ ಆ್ಯಸಿಡ್ ಎರಚಿದ್ದಾನೆ. ಜನತಾ ಅದಕ್ ಹಾಗೂ ಸಂತ್ರಸ್ತ ಬೆಳ್ಳಿ ಪಾಲಿಶ್ ಅಂಗಡಿಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ : – ಸಿದ್ದರಾಮಯ್ಯ ಅಲ್ಲ ನಿದ್ದೆರಾಮಯ್ಯ- ಸಚಿವ ಅಶ್ವಥ್ ನಾರಾಯಣ್ ಟಾಂಗ್
![](https://rajnewskannada.in/wp-content/uploads/2022/05/ರರರರ.png)
ಆದರೆ ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಜನತಾ ಅದಕ್ ಹಾಗೂ ಸಂತ್ರಸ್ತ ಕುಡಿದು ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ ಸಂತ್ರಸ್ತ ಮೊಬೈಲ್ ನಲ್ಲೇ ವೀಡಿಯೋ ಮಾಡಲು ಮುಂದಾಗಿದ್ದ. ಇದರಿಂದ ಕೋಪಗೊಂಡ ಜನತಾ ಅದಕ್ ಬೆಳ್ಳಿ ಪಾಲಿಶ್ ಮಾಡಲು ತಂದಿದ್ದ ಡೈಲೂಟ್ ಆ್ಯಸಿಡ್ ಎರಚಿ ಕೃತ್ಯವೆಸಗಿದ್ದಾನೆ.
ಇದನ್ನೂ ಓದಿ : – ರಾಜ್ಯಸಭೆಗೆ ಬಿಜೆಪಿಯಿಂದ ಮೂವರು ಸದಸ್ಯರನ್ನ ಕಳಿಸ್ತೇವೆ – ಯಡಿಯೂರಪ್ಪ ಭರವಸೆ