ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ( Sidhu Moosewala ) ಹಂತಕರಿಗೆ ಪಂಜಾಬ್ ಪೊಲೀಸರು ಇಂದು ಗನ್ ಮೂಲಕವೇ ಉತ್ತರ ಕೊಟ್ಟಿದ್ದಾರೆ.
ಪಂಜಾಬ್ ನ ಅಮೃತಸರದ ಸಮೀಪದ ಒಂಟಿ ಮನೆಯೊಂದರಲ್ಲಿ ಅವಿತು ಕುಳಿತಿದ್ದ ಅವರ ಮೇಲೆ ಪೊಲೀಸರು ಗುಂಡಿನ ಮಳೆಯನ್ನೇ ಸುರಿದಿದ್ದಾರೆ. ಪಾಕಿಸ್ತಾನ ಗಡಿಯಿಂದ ಕೇವಲ 10 ಕಿಮೀ ದೂರದ ಹಳ್ಳಿಯಲ್ಲಿ ಈ ಎನ್ ಕೌಂಟರ್ ನಡೆದಿದೆ. ಇದನ್ನು ಓದಿ : – ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ – ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್
ಪೊಲೀಸ್ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಅದೊಂದು ರಣಭೀಕರ ಎನ್ ಕೌಂಟರ್ ಆಗಿತ್ತು ಎನ್ನಲಾಗಿದೆ. ಅಟ್ಟಾರಿ ಅಂತಾರಾಷ್ಟ್ರೀಯ ಗಡಿ ಸಮೀಪದ ಹೋಶಿಯಾರ್ ನಗರದ ಭಾಕ್ನಾ ಗ್ರಾಮದಲ್ಲಿ ಗ್ಯಾಂಗ್ ಸ್ಟರ್ ಗಳಾದ ಮನ್ ಪ್ರೀತ್ ಮನ್ನು, ಜಗರೂಪ್ ರೂಪ್ ಸೇರಿದಂತೆ ಒಟ್ಟು ನಾಲ್ಕು ಜನರು ಇದ್ದರು.
ನಾಲ್ಕೂ ಜನರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಸಿಂಧು ಮೂಸೆವಾಲಾ ಹತ್ಯೆಯ ಹಿಂದೆ ಗ್ಯಾಂಗ್ ಸ್ಟರ್ ಲಾರೆನಸ್ ಬಿಶ್ನೋಯಿ ಅವರ ತಂಡದ ಕೈವಾಡವಿದೆ ಎಂದು ಹೇಳಲಾಗಿತ್ತು. ನಟ ಸಲ್ಮಾನ್ ಖಾನ್ ಸೇರಿದಂತೆ ಹಲವರಿಗೆ ಇದೇ ಗ್ಯಾಂಗ್ ಜೀವ ಬೆದರಿಕೆ ಕೂಡ ನೀಡಿತ್ತು.
ಇದನ್ನು ಓದಿ : – ಯೋಗಿ ಸಂಪುಟದಲ್ಲಿ ಅಸಮಾಧಾನ ಸ್ಫೋಟ – ನಿರ್ಲಕ್ಷ್ಯಕ್ಕೆ ಬೇಸತ್ತು ದಲಿತ ಸಚಿವರ ರಾಜೀನಾಮೆ