ಸಾರಿಗೆ ನೌಕರರ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಏಪ್ರಿಲ್ 7ರಂದು ಎಲ್ಲಾ ಸಾರಿಗೆ ಸೇವೆ ಸ್ತಬ್ಧಗೊಳಿಸಲಾಗುವುದು ಎಂದು ರೈತ ಪರಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರನ್ನು 6ನೇ ವೇತನ ಆಯೋಗಕ್ಕೆ ಸೇರ್ಪಡೆಗೊಳಿಸುವ ನಮ್ಮ ಪ್ರಮುಖ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮಾಡಲಾಗುವುದು. ಏಪ್ರಿಲ್ 1ರಿಂದ ಎಲ್ಲಾ ಡಿಪೋಗಳಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತೇವ ಎಂದರು.
ಏಪ್ರಿಲ್ 2ರಂದು ಬೆಂಗಳೂರು ವೃತ್ತಗಳಲ್ಲಿ ಕುಟುಂಬದವರೊಂದಿಗೆ ಸೇರಿಕೊಂಡು ಬಜ್ಜಿ ಬೊಂಡಾ ಮಾರತ್ತೇವೆ. ಏಪ್ರಿಲ್ 3ರಂದು ನೌಕರರು ಹಾಗೂ ಅವರ ಕುಟುಂಬದವರೊಂದಿಗೆ ಸರ್ಕಲ್ ಗಳಲ್ಲಿ ಮಾನವ ಸರಪಳಿ ಮಾಡಿ ಭಿತ್ತಿಪತ್ರ ಪ್ರದರ್ಶನ ಮಾಡುತ್ತೇವೆ. ಏ.4 ರಂದು ಸಾರ್ವಜನಿಕರಿಗೆ ಕರಪತ್ರ ಹಂಚುವುದು, 5ರಂದು ಧರಣಿ ಸತ್ಯಾಗ್ರಹ, 6 ರಂದು ಸಾಮೂಹಿಕ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಅವರು ವಿವರ ನೀಡಿದರು.
ಸರ್ಕಾರ ಏಸ್ಮಾ ಜಾರಿ ಮಾಡಿದರೆ ನಾವು ಭಯಪಡಲ್ಲ. ಏಪ್ರಿಲ್ 7 ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಲಾಗುವುದು. ನಾಗರಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.