ಪೋಲಿಸರ ಸಮಸ್ಯೆಗಳನ್ನು ಆಲಿಸಿ ಸರಿಪಡಿಸುವ ಕೆಲಸ ಮಾಡ್ತಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (ARAGA GNANENDRA ) ತಿಳಿಸಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-19-at-2.54.09-PM-1-1024x768.jpeg)
ರಾಮನಗರದಲ್ಲಿ ಮಾತನಾಡಿದ ಅವರು ಪಠ್ಯ ಪುಸ್ತಕದಲ್ಲಿ ಕೆಲವು ಪಠ್ಯಗಳನ್ನು ಕೈಬಿಟ್ಟ ವಿಚಾರ ಕುರಿತಂತೆ ಪ್ರತಿಕ್ರಿಯಿಸಿ ಇದು ನನ್ನ ಇಲಾಖೆ ಅಲ್ಲ. ಶಿಕ್ಷಣ ಸಚಿವರು ಪ್ರತಿದಿನ ಇದರ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಪಠ್ಯದಲ್ಲಿ ಆ ರೀತಿ ಯಾವುದೇ ಬದಲಾವಣೆಗಳಾಗಿಲ್ಲ. ಇವೆಲ್ಲಾ ಕೇವಲ ಊಹಾಪೋಹಗಳಿಂದ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ರು.
![](https://rajnewskannada.in/wp-content/uploads/2022/05/WhatsApp-Image-2022-05-19-at-2.54.12-PM-1024x768.jpeg)
ಬೆಂಗಳೂರಿನಲ್ಲಿ 28 ಮಂದಿ ಐಸಿಎಸ್ ಗೆ ಮತಾಂತರ ವಿಚಾರ ಕುರಿತಂತೆ ಪ್ರತಿಕ್ರಿಯಿಸಿ ನಾನು ಕೂಡ ಈ ವಿಚಾರವನ್ನು ಗಮನಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಈ ಬಗ್ಗೆ NIA ಗಮನಹರಿಸಿದೆ. ಖಂಡಿತವಾಗಿ ನಾವೂ ಕೂಡ ಜಾಗರೂಕವಾಗುತ್ತೇವೆ. ಈ ಎಲ್ಲದರ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ರು. ಇದನ್ನೂ ಓದಿ : – ರಾಜಕಾಲುವೆ ಅಕ್ಕಪಕ್ಕದಲ್ಲಿರುವ ಮನೆಗಳ ತೆರವಿಗೆ ಕ್ರಮ – ಸಿಎಂ ಬೊಮ್ಮಾಯಿ
![](https://rajnewskannada.in/wp-content/uploads/2022/05/WhatsApp-Image-2022-05-19-at-2.54.15-PM-1024x768.jpeg)
ಮಸೀದಿಗಳಲ್ಲಿ ಅಜಾನ್ ಬಳಕೆ ವಿಚಾರ.
ಇದೀಗ ಸತ್ಯವನ್ನು ಅವರೇ ಒಪ್ಪಿಕೊಂಡಿದ್ದಾರೆ. ಸಂಜೆ 6 ರ ನಂತರ ಉಪಯೋಗಿಸುತ್ತೇವೆ ಎಂದು ಹೇಳಿದ್ದಾರೆ. ಕೋರ್ಟ್ ನಲ್ಲಿ ಆದೇಶ ಇದೆ ಅಜಾನ್ ನಲ್ಲಿ ಎಷ್ಟು ಡೆಸಿಬಲ್ ಇದೆ, ಜೊತೆಗೆ ಲೈಸೆನ್ಸ್ ಪಡೆದುಕೊಳ್ಳಬೇಕು, ಪರಿಸರ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಬೇಕು. ಕೋರ್ಟ್ ನ ಆದೇಶ ಏನಿದೇ ಅದನ್ನು ಪಾಲಿಸಲೇಬೇಕು ಎಂದು ತಿಳಿಸಿದ್ರು. ಇದನ್ನೂ ಓದಿ : – SSLC – ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ – ವಿದ್ಯಾರ್ಥಿನಿಯರೇ ಮೇಲುಗೈ