ತುಮಕೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆ ಮುಂದೆ NSUI ಕಾರ್ಯಕರ್ತರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ NSUI ಕಾರ್ಯಕರ್ತರನ್ನ ಇಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಭೇಟಿ ಮಾಡಲಿದ್ದಾರೆ.
![](https://rajnewskannada.in/wp-content/uploads/2022/06/image-41-1024x576.png)
ತುಮಕೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ NSUI ಕಾರ್ಯಕರ್ತರಿಂದ ಘಟನೆ ಸಂಬಂಧ ಡಿ.ಕೆ ಶಿವಕುಮಾರ್ ಖುದ್ದು ಮಾಹಿತಿ ಪಡೆಯಲಿದ್ದಾರೆ. ನಿನ್ನೆಯಷ್ಟೇ ಎಂಎಲ್ಸಿ ರಾಜೇಂದ್ರ ಕೂಡ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ್ದರು. ಶಿಕ್ಷಣ ಸಚಿವ ಮನೆ ಬಳಿ ದಾಂಧಲೆ ಪ್ರಕರಣದಲ್ಲಿ NSUI ಕಾರ್ಯಕರ್ತರು ಪೊಲೀಸರ ವಶದಲ್ಲಿದ್ದಾರೆ.
ಇದನ್ನೂ ಓದಿ : – ಜೆಡಿಎಸ್ ಪಕ್ಷವನ್ನು ಅವಮಾನಿಸಲಾಗಿದೆ- ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ