ಹೋಟೆಲ್ ನ ಮಹಿಳಾ ಸಿಬ್ಬಂದಿ ಜೊತೆ ಪಿಐ ಅನುಚಿತ ವರ್ತನೆ ಹಿನ್ನೆಲೆ ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋಪಾಲಕೃಷ್ಣಗೌಡ ರನ್ನು ಸಸ್ಪೆಂಡ್ ಮಾಡಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ( lakshman nimbaragi ) ಆದೇಶ ಹೊರಡಿಸಿದ್ದಾರೆ.
ಕಳೆದ 5 ದಿನದ ಹಿಂದೆ ಪಿಐ ಗೋಪಾಲಕೃಷ್ಣಗೌಡ ( gopal krishna gowda ) ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯ ಹೋಟೆಲ್ ಒಂದಕ್ಕೆ ತೆರಳಿದ್ದರು. ಈ ವೇಳೆ ರೂಮ್ ನೀಡುವಂತೆ ಮಹಿಳಾ ಸಿಬ್ಬಂದಿ ಜೊತೆ ಪಿಐ ಗಲಾಟೆ ಮಾಡಿದ್ದಾರೆ. ಗಲಾಟೆಮಾಡಿ ಅನುಚಿತವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಹೋಟೆಲ್ ನ ಮಹಿಳಾ ಸಿಬ್ಬಂದಿ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಜೀವನ್ ಭೀಮಾನಗರ ಠಾಣೆ ಪೊಲೀಸರು ಎನ್.ಸಿ.ಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ : – ಹೆಚ್ಚಿನ ದರ ವಸೂಲಿ ಮಾಡಿದರೆ ಕಾನೂನು ಕ್ರಮ- ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ಕೊಟ್ಟ ಶ್ರೀರಾಮುಲು