ಗದಗ (Gadag) ಜಿಲ್ಲೆಯ ಟಿಪ್ಪು ಸುಲ್ತಾನ್ (Tippu sultan) ವೃತ್ತದಲ್ಲಿ ಬೆಳ್ಳಂ ಬೆಳಗ್ಗೆ ರಸ್ತೆ ಮೇಲೆ ಕುಳಿತು ಮಹಿಳೆಯರು ಪ್ರತಿಭಟನೆ (Protest) ನಡೆಸಿದ್ರು. ನಗರದ ಗಂಗಿಮಡಿಯಲ್ಲಿ ಕಳೆದ 20 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆ ಮಹಿಳೆಯರು ಖಾಲಿ ಕೊಡ ಹಿಡಿದು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಗದಗ ಹಾಗೂ ಹುಬ್ಬಳ್ಳಿ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ರಸ್ತೆ ತಡೆದು ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ನಿವಾಸಿಗಳು ಆಕ್ರೋಶ ಹೊರಹಾಕಿದ್ರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಅದೆಷ್ಟೇ ವಿನಂತಿಸಿದರೂ ಪ್ರತಿಭಟನಾಕಾರರು ಮಾತ್ರ ಯಾವೂದಕ್ಕೂ ಜಗ್ಗಲಿಲ್ಲ. ನಂತರ ನಗರಸಭೆ ಅಧಿಕಾರಿಗಳ ಭರವಸೆ ಮೇರೆಗೆ ಮಹಿಳೆಯರು ಪ್ರತಿಭಟನೆಯನ್ನ ಹಿಂಪಡೆದುಕೊಂಡರು.
ಇದನ್ನೂ ಓದಿ : – ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾನವೀಯತೆಯೇ ಇಲ್ಲ – ಡಿ.ಕೆ ಶಿವಕುಮಾರ್