ಭೂಕಬಳಿಕೆ ಆರೋಪ ಹಿನ್ನೆಲೆ – ಸಚಿವ ಶ್ರೀರಾಮುಲು ರಾಜೀನಾಮೆಗೆ ಎಸ್.ಆರ್.ಹೀರೆಮಠ್ ಆಗ್ರಹ

ಸಚಿವ ಬಿ.ಶ್ರೀರಾಮುಲು ( sriramulu ) ಬಳ್ಳಾರಿ ನಗರದಲ್ಲಿ 27.25 ಎಕರೆ ಪ್ರದೇಶ ಜಮೀನು ಕಬಳಿಸಿದ್ದಾರೆಂಬ ಆರೋಪಕ್ಕೆ ಸಂಬಂಧ ಪಟ್ಟಂತೆ ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಆಗ್ರಹಿಸಿದ್ದಾರೆ.

ಈ ವಿಷಯವಾಗಿ ಸುಪ್ರೀಂಕೋರ್ಟ್ ( supremcourt ) ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಒಂದು ವಾರದಲ್ಲಿ ಪತ್ರ ಬರೆದು ಶ್ರೀರಾಮುಲು ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಆಗ್ರಹಿಸಲಾಗುತ್ತದೆ. ಸಿಎಂ ಕ್ರಮ ತೆಗೆದುಕೊಳ್ಳದಿದ್ದರೆ ನ್ಯಾಯಾಂಗ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.  ಇದನ್ನು ಓದಿ :- ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡದೆ ತಾರತಮ್ಯ ಆರೋಪ- ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದ ಸಿ.ಟಿ ರವಿ

ವಿಚಾರಣೆ ನಡೆಸಲು ನ್ಯಾಯಾಲಯ ಸೂಚನೆ?
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಆದರೆ ಸಕ್ರಮ ಪ್ರಾಧಿಕಾರದ ಪರವಾನಗಿ ಇಲ್ಲದೆ ಮಾಡಿದ್ದಾರೆಂದು ಶ್ರೀರಾಮುಲು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ಇವರ ಮನವಿ ತಿರಸ್ಕರಿಸಿ ಪ್ರಕರಣದ ವಿಚಾರಣೆ ನಡೆಸಲಿ ಎಂದು ಸೂಚಿಸಿದೆ ಎಂದು ಹಿರೇಮಠ್ ತಿಳಿಸಿದ್ದಾರೆ.

ಮೂರು ತಿಂಗಳಿಗೊಮ್ಮೆ ಪರಿಶೀಲನೆ
ಸಾವಿರಾರು ಕೋಟಿ ರೂ.ಗಳ ಹಣವನ್ನು ಗಣಿಭಾದಿತ ವಲಯಗಳ ಅಭಿವೃದ್ದಿಗಾಗಿಯೇ ಬಳಸಬೇಕು, ಈ ಅಭಿವೃದ್ದಿ ಕಾರ್ಯದ ವರದಿಯನ್ನು ಮೂರು ತಿಂಗಳಿಗೊಮ್ಮೆ ಪರಿಶೀಲಿಸುವಂತೆ ಆದೇಶದಲ್ಲಿದೆ. ಉಸ್ತುವಾರಿ ಸಮಿತಿಯು ಸಿಎಜೆ ಅವರನ್ನು ಸಂಪರ್ಕಿಸಿ ಲೆಕ್ಕಪತ್ರವನ್ನು ಸರಿಯಾಗಿ ಇಡುವಂತೆ ಸಲಹೆ ಪಡೆಯಲು ತಿಳಿಸಿದೆ ಎಂದರು. ನಮ್ಮ ಉದ್ದೇಶ ಗಣಿಭಾದಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ ಹಾಗೂ ಸ್ಥಳೀಯ ಜನರ ಆರೋಗ್ಯ, ಪಶುಸಂಗೋಪನೆ, ಕೃಷಿಯನ್ನು ಒತ್ತುಕೊಟ್ಟು ಸಮಗ್ರ ಮಾನವೀಯ ವಿಕಾಸ ಆಗಬೇಕು. ಬೇರೆ ಕೆಲಸಗಳಿಗೆ ಈ ಹಣವನ್ನು ಬಳಸಬಾರದೆಂದು ಆಗ್ರಹಿಸಿದರು.

 ಇದನ್ನು ಓದಿ :- ಸಂಜಯ್ ರಾವತ್ ಬಂಧನ – ಸಂಸತ್ತಿನಲ್ಲಿ ವಿಪಕ್ಷಗಳಿಂದ ಭಾರಿ ಗದ್ದಲ, ಕಲಾಪ ಮುಂದೂಡಿಕೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!