ಬಂಟರ ಸಂಘದಿಂದ ಉಚಿತ ಆಕ್ಸಿಜನ್ ಅಭಿಯಾನಕ್ಕೆ ಡಿಸಿಎಂ ಅಶ್ವಥ ನಾರಾಯಣ ಚಾಲನೆ

ಬೆಂಗಳೂರು ಬಂಟರ ಸಂಘದ ವತಿಯಿಂದ ಕೋವಿಡ್ ಆರೈಕೆಗಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ ಪೂರೈಕೆಯ ಉಚಿತ ಆಕ್ಸಿಜನ್ ಅಭಿಯಾನವನ್ನು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥನಾರಾಯಣ ಉದ್ಘಾಟಿಸಿದ್ದಾರೆ.

ಬೆಂಗಳೂರು ಬಂಟರ ಸಂಘದ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಿಸಿಎಂ ಅಶ್ವಥ ನಾರಾಯಣ್, ಬೆಂಗಳೂರು ಬಂಟರ ಸಂಘದ ವತಿಯಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರಿಗೆ 20 ಆಕ್ಸಿಜನ್ ಕಾನ್ಸಂಟ್ರೇಟರ್‍ ಗಳನ್ನು ಪೂರೈಕೆ ಹಾಗೂ ವೈದ್ಯಕೀಯ ಆರೈಕೆಯನ್ನು ಸಹ ಮಾಡಲಾಗುತ್ತದೆ ಎಂದು ಹೇಳಿದರು.

ಬಂಟರ ಸಂಘ ಹಲವು ವರ್ಷಗಳಿಂದ ಶೈಕ್ಷಣಿಕವಾಗಿ ಮತ್ತು ಸಾಮಾಜಿಕ  ಜನಪರ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಆಕ್ಸಿಜನ್ ಕಾನ್ಸಂಟ್ರೇಟರ್ ಗಳ ಕೊರತೆಯ ಸಮಯದಲ್ಲಿ ಬೆಂಗಳೂರು ಬಂಟರ ಸಂಘ ನೆರವಿನ ಹಸ್ತ ನೀಡಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಮಾತನಾಡಿ, ಬಂಟರ ಸಂಘದಿಂದ 20 ಅಕ್ಸಿಜನ್ ಕಾನ್ಸಂಟ್ರೇಟರ್‍ ಗಳನ್ನು ಸಲಾಗುವುದು. ಮುಂದಿನ ದಿನಗಳಲ್ಲಿ ಒಟ್ಟು 100 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ನೀಡುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.

ಬೆಂಗಳೂರು ಬಂಟರ ಸಂಘದ ವೈದ್ಯಕೀಯ ವಿಭಾಗದಿಂದ ನೂರು ಮಂದಿ ವೈದ್ಯರ ತಂಡವನ್ನು ರಚಿಸಲಾಗಿದೆ. ಈ ತಂಡದಿಂದ ಸೋಂಕಿತರಿಗೆ ಸೂಕ್ತ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಲಾಗುತ್ತದೆ. ಹಾಗೇ,ಪ್ಲಾಸ್ಮಾ ದಾನ ಮಾಡುವವರಿಗೂ ಸೂಕ್ತ ಸಹಾಯವನ್ನು ಮಾಡಲಾಗುತ್ತದೆ ಎಂದು ಹೇಳಿದ್ರು.

ಬೆಂಗಳೂರು ಬಂಟರ ಸಂಘದ ಸದಸ್ಯರು, ಸಮುದಾಯದವರು, ಆರ್ ಎನ್.ಎಸ್ ವಿದ್ಯಾಸಂಸ್ಥೆಯ ಶಾಲಾ ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸುಮಾರು ಎಂಟು ಸಾವಿರ ಪೋಷಕರು ಈ ಉಚಿತ ಆಕ್ಸಿಜನ್ ಅಭಿಯಾನದ ನೆರವು ಪಡೆಯಬಹುದಾಗಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಡಾ. ಬೇಳೂರು ರಾಘವೇಂದ್ರ ಶೆಟ್ಟಿ, ಗೋವಿಂದರಾಜನಗರದ ಮಾಜಿ ಪಾಲಿಕೆ ಸದಸ್ಯ ಉಮೇಶ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಗೌರವ ಕಾರ್ಯದರ್ಶಿ ಮಧುಕರ ಎಂ. ಶೆಟ್ಟಿ, ವೈದ್ಯಕೀಯ ವಿಭಾಗದ ಚೇರ್ ಮೆನ್ ಡಾ. ಬಿ. ನಿಶಾಕಾಂತ್ ಶೆಟ್ಟಿ, ಜತೆ ಕಾರ್ಯದರ್ಶಿ ಸೌಮ್ಯಾ ಪ್ರಿಯ ಹೆಗ್ಡೆ, ಉಪಾಧ್ಯಕ್ಷೆ ಅಮೃತಾ ಶೆಟ್ಟಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!