ರಸ್ತೆ ಗುಂಡಿಗಳ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವ್ಯಾಜ್ಯಗಳು ಮತ್ತು ನಾಗರಿಕರ ಹಲವು ಕುಂದುಕೊರತೆಗಳ ನಡುವೆ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಹೊಸದಾಗಿ ನೇಮಕಗೊಂಡಿರುವ ತುಷಾರ್ ಗಿರಿನಾಥ್ ಅಧಿಕಾರ ವಹಿಸಿಕೊಂಡಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-06-at-5.21.49-PM-1024x762.jpeg)
ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ತುಷಾರ್ ಗಿರಿನಾಥ್ ಅವರು ರಸ್ತೆ ಗುಂಡಿಗಳ ನಿರ್ವಹಣೆಯ ಸಮಸ್ಯೆ ಈಗ ಕೇವಲ ಅದಕ್ಕಷ್ಟೇ ಸೀಮಿತವಾಗಿಲ್ಲ. ಅದು ಸಮಸ್ಯೆಗಳ ಆಗರವೇ ಆಗಿದೆ. ಗುಂಡಿಗಳ ಸಮಸ್ಯೆ ನಿರ್ವಹಣೆ ಮತ್ತು ಗುಂಡಿ ಮುಕ್ತ ರಸ್ತೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ. ಇದನ್ನು ಓದಿ : – ಬೆಂಗಳೂರಿನಲ್ಲಿ 3 ದಿನದಿಂದ ಬಿಟ್ಟುಬಿಡದೆ ಮಳೆ – ಜನ ಹೈರಾಣು
![](https://rajnewskannada.in/wp-content/uploads/2022/05/WhatsApp-Image-2022-05-06-at-5.21.48-PM-1-1024x622.jpeg)
ಈ ವಿಚಾರವನ್ನು ಹೈಕೋರ್ಟ್ ಹಾಗೂ ಮುಖ್ಯ ಕಾರ್ಯದರ್ಶಿಗಳ ಮುಂದೆ ಪ್ರಸ್ತಾಪಿಸಲಾಗಿದೆ ಎಂದರು. ನಗರದಲ್ಲಿ ಮಳೆ ಸಂಬಂಧಿತ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳುವುದು ತಮ್ಮ ಮೊದಲ ಆದ್ಯತೆಯಾಗಿದೆ. ಇದಕ್ಕಾಗಿ ಎಲ್ಲಾ ಅಲ್ಪಾವಧಿಯ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-06-at-5.21.48-PM-1024x622.jpeg)
ಕೋವಿಡ್ 19 ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಪ್ರಕರಣಗಳು ಹೆಚ್ಚಾಗದಂತೆ ನೋಡಿಕೊಳ್ಳುವುದು ಮತ್ತೊಂದು ಸವಾಲಾಗಿದೆ ಎಂದು ಹೇಳಿದರು. ಮೂಲಸೌಕರ್ಯ ಮತ್ತು ಘನತ್ಯಾಜ್ಯ ನಿರ್ವಹಣೆ ಬಗ್ಗೆಯೂ ಹೆಚ್ಚು ಗಮನ ನೀಡಲಾಗುವುದು ಎಂದಿದ್ದಾರೆ.
ಇದನ್ನು ಓದಿ : – ಕೊರೊನಾ ಅಂಕಿ-ಅಂಶ ಬಗ್ಗೆ ಯಾವುದೇ ಊಹಾಪೋಹಗಳು, ಅಪಪ್ರಚಾರಗಳಿಗೆ ಕಿವಿಗೋಡುವುದು ಬೇಡ – ಡಾ.ಕೆ.ಸುಧಾಕರ್