ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಮಹೇಂದ್ರ (34) ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ 11 ಮಂದಿಯನ್ನು ಬಳ್ಳಾರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-02-at-5.52.00-PM-1024x768.jpeg)
ಕೇಶವ, ಬಾಬು, ನವೀನ್, ವಂಶಿ, ಶಂಕರ, ಧನುಂಜಯ, ಟಿ.ರವಿ, ಸೂರಿ, ಪ್ರಕಾಶ್, ನವೀನ್ ಬಂಧಿತ ಆರೋಪಿಗಳು. ಬಂಧಿತರಿಂದ ಮಚ್ಚು ಕತ್ತಿಗಳು ವಶಪಡಿಸಿಕೊಳ್ಳಲಾಗಿದೆ. ಕೊಲೆಯಾದ ರೌಡಿ ಶೀಟರ್ ಮಹೇಂದ್ರ, ತಾಂಡಾ ರಮೇಶ ಎಂಬಾತನ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಈ ಹಿಂದೆ ಮೂರು ಬಾರಿ ಮಹೇಂದ್ರನ ಕೊಲೆಗೆ ಯತ್ನಿಸಲಾಗಿತ್ತು. ಇದನ್ನು ಓದಿ:-ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ದೊಡ್ಡ ದೊಡ್ಡ ಅಧಿಕಾರಿಗಳು ಭಾಗಿ – ಹೆಚ್ಡಿಕೆ ಹೊಸ ಬಾಂಬ್
![](https://rajnewskannada.in/wp-content/uploads/2022/05/WhatsApp-Image-2022-05-02-at-5.52.00-PM1-1024x768.jpeg)
ನಿನ್ನೆ ರಾತ್ರಿ ಮನೆ ತೆರಳುವ ವೇಳೆ ನಗರದ ಹಾವಂಭಾವಿ ಪ್ರದೇಶದಲ್ಲಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ದುಷ್ಕರ್ಮಿಗಳು ಮಹೇಂದ್ರನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿತ್ತು. ಅದರಂತೆ ಡಿವೈಎಸ್ಪಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಹಳೆಯ ವೈಷಮ್ಯವೇ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಸೈದುಲು ಅದಾವತ್ ಹೇಳಿದ್ದಾರೆ.
ಇದನ್ನು ಓದಿ :-ನನ್ನ ಬಂಧನಕ್ಕೆ ಪ್ರಧಾನಿ ಕಚೇರಿಯಿಂದಲೇ ಷಡ್ಯಂತ್ರ – ಜಿಗ್ನೇಶ್ ಮೇವಾನಿ