ಕೆನಡಾದ ಸಂಸತ್ ನಲ್ಲಿ ಮಾತೃಭಾಷೆಯಲ್ಲೇ ಮಾತನಾಡಿದ ಕನ್ನಡಿಗ

ಕೆನಡಾದಲ್ಲಿ ಕಸ್ತೂರಿ ಕನ್ನಡ ಭಾಷೆ ಮೊಳಗಿದೆ. ಅದರಲ್ಲೂ ವಿಶೇಷವಾಗಿ ಕೆನಡಾದ ಪಾರ್ಲಿಮೆಂಟ್ ನಲ್ಲಿ ಕನ್ನಡಿಗರೊಬ್ಬರು ಮಾತೃ ಭಾಷೆ ಕನ್ನಡವನ್ನು ಮಾತನಾಡೋ ಮೂಲಕ ಸಮಸ್ತ ಕನ್ನಡಿಗರ ಹೃದಯ ಗೆದ್ದಿದ್ದಾರೆ.

ಕೆನಡಾದ ಪಾರ್ಲಿಮೆಂಟ್ ಸಂಸದರಾಗಿರುವ ತುಮಕೂರು ಮೂಲದ ಕನ್ನಡಿಗ ಚಂದ್ರ ಆರ್ಯ ‘ನಾನು ನನ್ನ ಮಾತೃಭಾಷೆ ಕನ್ನಡದಲ್ಲೇ ಮಾತನಾಡುತ್ತೇನೆ’ ಎಂದು ಹೇಳುವ ಮೂಲಕ ಸಿರಿಗನ್ನಡದ ಕಂಪನ್ನು ಹೊರಜಗತ್ತಿನಲ್ಲಿ ಪಸರಿಸಿದ್ದಾರೆ. ಮಾನ್ಯ ಸಭಾಪತಿ, ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃ ಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ.

ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಕನ್ನಡದಲ್ಲಿ ಮಾತನಾಡುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ. ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.

ರಾಷ್ಟ್ರಕವಿ ಕುವೆಂಪು ಬರೆದಿರುವ ಮತ್ತು ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಹಾಡಿರುವ ಭಾವಗೀತೆಯ ಕೆಲವು ಪದಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತ್ತಿದ್ದೇನೆ. ಎಲ್ಲಾದರೂ ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು. ಧನ್ಯವಾದಗಳು ಸಭಾಪತಿ. ಆರ್ಯ ಮಾತು ಮುಕ್ತಾಯವಾಗುತ್ತಿದ್ದಂತೆ ಸಂಸತ್ ನಲ್ಲಿ ಚಪ್ಪಾಳೆಯ ಸದ್ದು ಮೊಳಗಿತು. ಇವರ ಭಾಷಣದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಚಂದ್ರ ಆರ್ಯರ ಕನ್ನಡಾಭಿಮಾನಕ್ಕೆ ವ್ಯಾಪ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ :-  ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ – ಬಿ.ಸಿ ನಾಗೇಶ್‌ ಟ್ವೀಟ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!