ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ – ತಿರುಗೇಟು ನೀಡಿದ ಡಿಕೆಶಿ

ನಿನ್ನೆ ಕೊಪ್ಪಳ ( KOPAL ) ದಲ್ಲಿ ಅಭ್ಯರ್ಥಿಗಳನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ( SIDDARAMAIAH ) ಘೋಷಣೆ ಮಾಡಿದ್ದಾರೆ.

ನಿನ್ನೆ ಕೊಪ್ಪಳ ( KOPPAL ) ದಲ್ಲಿ ಅಭ್ಯರ್ಥಿಗಳನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ( SIDDARAMAIAH ) ಘೋಷಣೆ ಮಾಡಿದ್ದಾರೆ. ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( D.K SHIVKUMAR ) ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಐಸಿಸಿ ಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡುವ ಹಕ್ಕು ಇದೆ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕೆಲ ಸಂದರ್ಭಗಳಲ್ಲಿ ಕಳೆದ ಸೋಲು ಕಂಡವರಿಗೆ ಎನ್ಕ್ರೇಜ್ ಮಾಡಿ ಹೇಳಿರಬಹುದು. ಅದನ್ನು ಬಿಟ್ಟರೆ ಮಲ್ಲಿಕಾರ್ಜುನ ಅವರೇ ನಮಗೆ ಹೈಕಮಾಂಡ್ ಅವರಿಗೆ ಘೋಷಣೆ ಮಾಡುವ ಹಕ್ಕಿದೆ. ನನಗೂ ಕೂಡ ಆ ಹಕ್ಕಿಲ್ಲ ಎಂದು ಹೇಳಿದ್ರು. ಇದನ್ನೂ ಓದಿ : –  ಮದುವೆ ಮನೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದ ಸಿದ್ದರಾಮಯ್ಯ..!

ವೋಟರ್ ಐಡಿ ಹಗರಣದ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡುವ ವಿಚಾರವಾಗಿ ಮಾತನಾಡಿದ ಅವರು, ನಾವು ನಾಳೆಗೆ ಟೈಮ್ ಕೇಳಿದ್ದೇವೆ. ನಮಗೆ ಚಿಫ್ ಎಲೆಕ್ಷನ್ ಕಮಿಷನರೇ ಬೇಕು. ನಮ್ಮ ಹತ್ರ ಅನೇಕ ಮಾಹಿತಿ ಇದೆ. ಪೊಲೀಸ್ ಅಧಿಕಾರಿಗಳು ಏನು ಮಾಡ್ತಾ ಇದ್ದಾರೆ ಎಂದು ಗಮನಿಸುತ್ತಿದ್ದೇವೆ. ನಮ್ಮಕಡೆ ಏನೇನು MOU ಗಳಿವೆ, ಡಿಟೈಲ್ ತನಿಖೆ ಮಾಡಿದ್ದೇವೆ. ಮ್ಯಾಪಿಂಗ್ ಯಾವ ರೀತಿ ಮಾಡಿದ್ದಾರೆ, ಅದಕ್ಕೆ ಅನುಮತಿ ಇದೆಯಾ. ಮಾಧ್ಯಮಗಳಲ್ಲಿ ಎಲೆಕ್ಷನ್ ಅಫೀಸರ್ ಒಪ್ಪಿಕೊಂಡಿದ್ದಾರೆ. ನಮಗೆ ಹೈರ್ ಅಫೀಸರಿಂದ ಆದೇಶ ಬಂತು. ಆದೇಶ ಬಂದಿದ್ದಕ್ಕೆ ನಮ್ಮ ಕರ್ತವ್ಯ ಮಾಡಿದ್ದೇವೆ ಎಂದು ಹೇಳಿದ್ದಾರೆ. 15,000 ಸಾವಿರಕ್ಕೆ ಕೆಲಸಕ್ಕೆ ಬಂದಿರುವರನ್ನು ಅರೆಸ್ಟ್ ಮಾಡುವುದಲ್ಲ. ಯಾರು ಕಿಂಗ್ ಪಿನ್ ಇದ್ದಾರೆ, ಯಾರು ಮಂತ್ರಿಗಳು ಇದ್ದಾರೆ, ಯಾರು ಶಾಸಕರು ಇದ್ದಾರೆ, ಇವರೆಲ್ಲ ದಾಖಲಾತಿಗಳು ನಮ್ಮ ಕಡೆ ಇದೆ. ಶಾಸಕರ ರೆಕಮೆಂಡ್ ಮಾಡಿರುವ ದಾಖಲಾತಿ, ಶಾಸಕರು, ಮಂತ್ರಿಗಳು ಪೋನ್ ನಲ್ಲಿ ಮಾತಾಡಿದ್ದು ದಾಖಲೆ ಇದೆ. ರಾಜರಾಜೇಶ್ವರಿ, ಮಲ್ಲೇಶ್ವರಂ, ಬೊಮ್ಮನಹಳ್ಳಿ, ಮಹಾದೇವಪ್ಪರ 28 ಕ್ಷೇತ್ರದ AROಗಳ ಮೇಲೆ ಕೇಸ್ ದಾಖಲು ಆಗಬೇಕು. ಪೊಲೀಸ್ ರು ಏನು ಮಾಡ್ತಾರೆ ಎಂದು ಕಾಯುತ್ತಿದ್ದೇವೆ ಎಂದು ಹೇಳಿದ್ರು.

ಕಾಂಗ್ರೆಸ್ ( CONGRESS ) ವಿರುದ್ಧ ಸಿಎಂ ಆರೋಪ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, 2013 ರಿಂದ ತನಿಖೆ ಮಾಡ್ತೇವೆ ಎಂದು ಹೇಳಿದ್ದಾರೆ. ಸಿಎಂ ಮಾತನ್ನು ನಾವು ಸ್ವಾಗತ ಮಾಡ್ತೇವೆ ನಮ್ಮದು ಮಾಡಲಿ, ಅವರದ್ದು ಮಾಡಲಿ. ನಾವು ತಪ್ಪು ಮಾಡಿದ್ರೆ ಶಿಕ್ಷೆ ಕೊಡಲಿ. ಮತದಾನವನ್ನು ಮಾರುತ್ತಿದ್ದಾರೆ . ದತ್ತಾಂಶ ಕೊಟ್ಟು ಮಾರಾಟ ಮಾಡುತ್ತಿದ್ದಾರೆ. ಎಷ್ಟೆಷ್ಟು ಹಣ , ಎಷ್ಟು ಕಲೆಕ್ಟ್ ಆಗುತ್ತಿತ್ತು ಎಲ್ಲಾ ಮಾಹಿತಿ ನಮ್ಮ ಕಡೆ ಇದೆ. ಇದು ಪಬ್ಲಿಕ್ ಆಸ್ತಿ, ಅಧಿವೇಶನ ಏನು ರೀ, ಮಾಧ್ಯಮಗಳಿಗೆ ಧನ್ಯವಾದಗಳು ತಿಳಿಸುತ್ತೇನೆ. ಬಿಜೆಪಿ ಎಂಎಲ್ಎ, ಎಂಎಲ್ಸಿ ,ಬಿಜೆಪಿ ಸರ್ಕಾರ ಮಾಡಿದೆ. ಮತದಾರ ಪಟ್ಟಿಯಿಂದ ಅಹಿಂದ ಮತಗಳನ್ನು ಡಿಲೀಟ್ ಮಾಡಿದ್ದಾರೆ. ಯಾರು ಅವರಿಗೆ ಮತ ಹಾಕಲ್ಲ ಅವರದ್ದಲ್ಲೆ ಡಿಲೀಟ್ ಮಾಡಿದ್ದಾರೆ. ಈ ಎಲ್ಲಾ ಮಾಹಿತಿ ನಮ್ಮ ಕಡೆ ಇದೆ ಎಂದು ಹೇಳಿದ್ರು.

ಇದನ್ನೂ ಓದಿ : – ಶಾರೀಕ್ ಗುರುತು ಪತ್ತೆ ಹಚ್ಚಲು ಮಂಗಳೂರಿಗೆ ಆಗಮಿಸಿದ ಕುಟುಂಬಸ್ಥರು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!