ಗುಜರಾತ್ ನಲ್ಲಿ ಭಗವದ್ಗೀತೆ ಪಠ್ಯಕ್ಕೆ ಸೇರಿಸಲಾಗುವುದು ಎಂದು ಘೋಷಣೆಯಾದ ಬೆನ್ನಲ್ಲೇ ರಾಜ್ಯದಲ್ಲಿಯೂ ಈ ಸುದ್ದಿ ಭಾರೀ ಚರ್ಚೆಯಾಗುತ್ತಿದೆ. ಈ ಕುರಿತು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ. ಖುರಾನ್ ಮತ್ತು ಬೈಬಲ್ ಧಾರ್ಮಿಕ ಗ್ರಂಥಗಳು. ಭಗವದ್ಗೀತೆಯಲ್ಲಿ ಜೀವನದ ಪಾಠ ಇದೆ, ನೈತಿಕತೆ ಇದೆ. ಅದು ಯಾವುದು ಸರಿ ಯಾವುದು ತಪ್ಪು ಎನ್ನುವುದನ್ನು ಭೋದಿಸುತ್ತದೆ. ಭಗವದ್ಗೀತೆ ಜೀವನದ ಮೌಲ್ಯಗಳನ್ನು ಕಲಿಸುತ್ತದೆ ಎಂದು ವಿವರಿಸಿದರು.
ಹಿಜಬ್ ವಿಚಾರವಾಗಿ ಮಾತನಾಡಿದ ಅವರು ಧರ್ಮನೇ ಸುಪ್ರಿಂ ಅಂತ ಹೇಳುತ್ತಾರೆ. ದೇಶಕ್ಕಿಂತ ಧರ್ಮನೇ ಮುಖ್ಯ ಎನ್ನುತ್ತಿದ್ದಾರೆ. ಇದು ಹಿಜಬ್ ವಿಷಯದಲ್ಲಿ ಮತ್ತೊಮ್ಮೆ ಸಾಭೀತಾಗಿದೆ. ಕೋರ್ಟ್ ತೀರ್ಪನ್ನೇ ಧಿಕ್ಕರಿಸಿದ್ದಾರೆ. ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಅವರಿಗೆ ಅಂದೇ ಇದೆಲ್ಲಾ ಗೊತ್ತಾಗಿತ್ತು. ನಮ್ಮ ಜನರಿಗೆ ಈಗ ಅರ್ಥವಾಗಿದೆ ಎಂದು ಬಂದ್ ಗೆ ಕರೆ ನೀಡಿದವರಿಗೆ ಟಾಂಗ್ ಕೊಟ್ಟರು.
0 73 Less than a minute