ಜಾರಿ ನಿರ್ದೇಶನಾಲಯ(Enforcement directorate) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಗುರುವಾರ ಆರೋಪಪಟ್ಟಿ ದಾಖಲಿಸಿದೆ. ಈ ಮೂಲಕ ಇಡಿ ಮತ್ತೊಮ್ಮೆ ಡಿ ಕೆ ಶಿವಕುಮಾರ್ (DK SHIVAKUMAR) ಗೆ ಶಾಕ್ ಕೊಟ್ಟಿದೆ.
![](https://rajnewskannada.in/wp-content/uploads/2022/05/image-24.png)
ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಡಿ ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದಾಯ ತೆರಿಗೆ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಕುಮಾರ್ ಸದ್ಯ ಜಾಮೀನಿನ ಮೇಲೆ ಇದ್ದಾರೆ. ಇದನ್ನೂ ಓದಿ : – SSLC ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ – ರಾಮನಗರದಲ್ಲಿ 8 ಮಂದಿ ಆರೋಪಿಗಳು ಪೊಲೀಸ್ ವಶಕ್ಕೆ
![](https://rajnewskannada.in/wp-content/uploads/2022/05/image-25-1024x683.png)
2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೆಹಲಿಯಲ್ಲಿ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. 50 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿದ್ದು ನಂತರ ದೆಹಲಿ ಹೈಕೋರ್ಟ್ ನಿಂದ ಜಾಮೀನು ಮೇಲೆ ಹೊರಬಂದಿದ್ದರು.
ಇದನ್ನೂ ಓದಿ : – ಪ್ರವಾಸವನ್ನು ವಿಸ್ತರಿಸಿದ ಬೊಮ್ಮಾಯಿ, ಶುಕ್ರವಾರ ಬೆಂಗಳೂರಿಗೆ ವಾಪಸ್