ಬಿಜೆಪಿಯವರು ಹೊಸ ಸಂಪ್ರದಾಯ ಶುರು ಮಾಡಿದ್ದಾರೆ. ಪ್ರತಿಭಟನೆ ಮಾಡೋದು ನಮ್ಮ ಹಕ್ಕು. ನನ್ನನ್ನು ಇಡಿ ಕರೆದುಕೊಂಡು ಹೋಗಿದ್ದಾಗ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ರ್ಯಾಲಿ ಮಾಡಿದ್ರು. ಯಾರಾದರೂ ಗಲಾಟೆ ಮಾಡಿದ್ರಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
![](https://rajnewskannada.in/wp-content/uploads/2022/06/image-217-1024x614.png)
ಬೆಂಗಳೂರಿನಲ್ಲಿ ಮಾತನಾಡಿದ ಅವರು ಅವರು ನೋವು ,ದುಃಖ ದುಮ್ಮಾನ ಹೇಳಿಕೊಂಡ್ರು.ದೇಶದ ಉದ್ದಗಲಕ್ಕೂ ನಮ್ಮ ನಾಯಕರು ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ನಿನ್ನೆ ಗಲಾಟೆ ಆಯಿತು. ಶ್ರೀನಿವಾಸ್ ಮನೆಯಿಂದ ಹೊರ ಬರುವ ಮುಂಚೆ ಅರೆಸ್ಟ್ ಮಾಡಲು ಹೋಗಿದ್ದರು. ಆತ ಪ್ರತಿಭಟನೆಗೆ ಹೋಗಬೇಕು. ಅರೆಸ್ಟ್ ಮುಖ್ಯನಾ, ಪ್ರತಿಭಟನೆ ಮುಖ್ಯನಾ. ಹೋಗಲೇ ಬಾರದು ಎಂದರೇ ಹೇಗೆ. ಪ್ರತಿಭಟನೆಗೆ ಹೋಗದಂತೆ ಎಲ್ಲಾ ಗಾಡಿಗಳನ್ನು ತಡೆ ಹಿಡಿದ್ದರು. ಬೆಳಿಗ್ಗೆ ಎಐಸಿಸಿ ಕಚೇರಿಗೆ ನಮ್ಮ ಲೀಡರ್ ಗಳು ಹೋದ್ರೆ ಬಂಧನ ಮಾಡಿದ್ದಾರೆ. ಇದನ್ನೂ ಓದಿ : – ಯೋಗಿ ಸರ್ಕಾರದ ಬುಲ್ಡೋಜರ್ ಕಾರ್ಯಾಚರಣೆ ಕಾನೂನು ಬಾಹಿರ – ಸುಪ್ರೀಂ ಕೋರ್ಟ್ ಗೆ ಅರ್ಜಿ
![](https://rajnewskannada.in/wp-content/uploads/2022/06/image-218.png)
ಏನಿದು ಅನ್ಯಾಯ, ಏನು ಕ್ರೈಮ್ ಮಾಡಿದ್ದಾರೆ. ಏನು ಮಾಡಬಾರದು ಮಾಡಿದ್ದಾರೆ. ನಮ್ಮ ಕಚೇರಿಗೆ ಹೋದ್ರೆನೇ ಅರೆಸ್ಟ್ ಮಾಡ್ತಾರೆ ಅಂದರೆ ಇಂತಹ ನೀಚ ರಾಜಕಾರಣ ಮಾಡುತ್ತಿದ್ದಾರೆ. ಇದು ತುರ್ತು ಪರಿಸ್ಥಿತಿಗಿಂತ ದೊಡ್ಡ ವಿಚಾರ ಮಾಡುತ್ತಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ. ಹಾಗಾಗಿ ನಾವು ಹೋರಾಟ ಮಾಡ್ತೇವೆ. ನಮ್ಮ ನಾಯಕರು ಯಾವ ತಪ್ಪು ಮಾಡಿಲ್ಲ ಎಂದು ತಿಳಿಸಿದ್ರು.
ಇದನ್ನೂ ಓದಿ : – ಪ್ರವಾದಿ ಕುರಿತ ಹೇಳಿಕೆ ವಿವಾದ -ಬಂಗಾಳದಲ್ಲಿ ಇಂಟರ್ನೆಟ್ ಸ್ಥಗಿತ – ಉತ್ತರಪ್ರದೇಶದಲ್ಲಿ 227 ಮಂದಿ ಬಂಧನ