ಕಲಬುರ್ಗಿ : ಕೊರೊನಾ ವೈರಸ್ ಹರಡಲು ಹಾಗೂ ಜನರು ಸಾವನ್ನಪ್ಪಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕೊರೊನಾ ವ್ಯಾಕ್ಸಿನ್ ಬಗ್ಗೆ ಜನರ ದಿಕ್ಕು ತಪ್ಪಿಸಿತ್ತು. ಇದು ಪ್ರಧಾನಿ ಮೋದಿ ಲಸಿಕೆ, ಬಿಜೆಪಿ ಲಸಿಕೆ ಎಂದು ಟೀಕಿಸಿದರು. ಇದರಿಂದ ಜನರು ಭಯಗೊಂಡು ದೂರು ಉಳಿದರು. ಇದು ಕಾಂಗ್ರೆಸ್ ಚಿಲ್ಲರೆ ರಾಜಕಾರಣ. ಕೊರೊನಾಗೆ ಜನ ಬಲಿಯಾಗಿದ್ರೆ ಅದಕ್ಕೆ ಕಾಂಗ್ರೆಸ್ ಕಾರಣ ಎಂದು ಕಿಡಿಕಾರಿದರು.
ಜಿಲ್ಲಾಧಿಕಾರಿಗಳ ಜತೆ ಸಿದ್ಧರಾಮಯ್ಯ ಸಭೆಗೆ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ನಳೀನ್ ಕುಮಾರ್ ಕಟೀಲ್, ವಿಪಕ್ಷ ನಾಯಕರು ಸಂವಿಧಾನ ಬದ್ಧವಾಗಿ ಕಾರ್ಯ ನಿರ್ವಹಿಸಲಿ. ಎಲ್ಲೆ ಮೀರಿ ವರ್ತಿಸಿದರೆ ಸರ್ಕಾರಕ್ಕೂ ನಿಯಮಗಳಿವೆ.ಎಂದು ಸಿದ್ಧರಾಮಯ್ಯಗೆ ತಿರುಗೇಟು ನೀಡಿದರು. ಸರಕಾರಕ್ಕೂ ಹೈಕೋರ್ಟ್ ಚಾಟಿ ಬೀಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಲಸಿಕೆ ಏಕಾಏಕಿ ತಯಾರು ಮಾಡಲು ಆಗುವುದಿಲ್ಲ. ಉತ್ಪಾದಿಸಿ ಎಲ್ಲಾ ರಾಜ್ಯ ,ಎಲ್ಲ ಜಿಲ್ಲೆಗಳಿಗೆ ಹಂಚಿಕೆ ಮಾಡಬೇಕು. ಆ ಕಾರ್ಯ ನಮ್ಮ ಸರಕಾರ ಮಾಡುತ್ತಿದೆ. ನ್ಯಾಯಾಲಯ ತೀರ್ಪಿನ ಆಧಾರದಲ್ಲಿ ಎಲ್ಲವನ್ನೂ ಕೊಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು