ಮೀನುಗಾರಿಕಾ ಬೋಟ್ ವೊಂದು ಅವಘಡಕ್ಕೀಡಾಗಿ ದಡಕ್ಕೆ ಅಪ್ಪಳಿಸಿದ ಘಟನೆ ಮಂಗಳೂರಿನ ಉಳ್ಳಾಲ ಕೋಡಿಯಲ್ಲಿ ನಡೆದಿದೆ. ಬೋಟ್ ನಲ್ಲಿದ್ದ 10 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಉಳ್ಳಾಲದ ಅಶ್ರಫ್ ಎಂಬುವವರಿಗೆ ಸೇರಿದ ಅಝಾನ್ ಎಂಬ ಹೆಸರಿನ ಬೋಟ್ ಶನಿವಾರ ತಡರಾತ್ರಿ ಮಂಗಳೂರಿನ ದಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ಹೊರಟಿತ್ತು. ಇಂದು ನಸುಕಿನ ವೇಳೆ ಬೋಟ್ ಉಳ್ಳಾಲ ಕೋಡಿಯ ಸೋಲಾರ್ ಕ್ಲಬ್ ಸಮೀಪ ಸಮುದ್ರ ದಡಕ್ಕೆ ಅಪ್ಪಳಿಸಿ ನಿಂತಿದೆ. ಈ ವೇಳೆ ಅದರಲ್ಲಿದ್ದ ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.