ಮಧುಗಿರಿ ( MADHU GIRI )ವಿಧಾನಸಭಾ ಕ್ಷೇತ್ರದ ಕೊಡಿಗೇನಹಳ್ಳಿಯಲ್ಲಿ ಮನೆಯ ಸಂಪ್ನಲ್ಲಿ ಮುಳುಗಿದ್ದ 4 ವರ್ಷದ ಬಾಲಕ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ವಿಳಂಬದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಶುಕ್ರವಾರ ಕೊಡಿಗೇನಹಳ್ಳಿ ಗ್ರಾಮದಲ್ಲಿ ನಡೆದ ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ( PANCHA RATHNA RATHA YATHRE ) ನಡೆಯುತ್ತಿತ್ತು. ಯಾತ್ರೆ ನಡೆಯುತ್ತಿದ್ದ ಸ್ಥಳಕ್ಕೆ ಬಾಲಕನ ಮೃತದೇಹ ಹೊತ್ತು ಪೋಷಕರು ಬಂದಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ಇಲಾಖೆ ಅದೆಷ್ಟು ಹದಗೆಟ್ಟು ಹೋಗಿದೆ, ಯಾವ ಮಟ್ಟಕ್ಕೆ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮಧುಗಿರಿ ವಿಧಾನಸಭೆ ಕ್ಷೇತ್ರದ ಕೊಡಿಗೇನಹಳ್ಳಿಯಲ್ಲಿ ನಡೆದ 4 ವರ್ಷದ ಬಾಲಕನ ದುರಂತ ಮರಣವೇ ಸಾಕ್ಷಿ. 1/7#ಅನಾರೋಗ್ಯ_ಇಲಾಖೆ pic.twitter.com/yTpqsvKwSc
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 2, 2022
ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದ ಕಾರಣ ಚಿಕಿತ್ಸೆ ವಿಳಂಬವಾಗಿ ಬಾಲಕ ಮೃತಪಟ್ಟಿರುವ ವಿಚಾರ ತಿಳಿಸಿದ್ದಾರೆ. ಸ್ಥಳದಲ್ಲಿ ಹೆಚ್ಡಿಕೆ ಅವರ ಬೆಂಗಾವಲು ಪಡೆಯಲ್ಲಿದ್ದ ಡಾ ಪುರುಷೋತ್ತಮ್ ಅವರು ಹಾಜರಿದ್ದು, ಈ ವೇಳೆ ಬಾಲಕನನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಾಲಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಈ ವೇಳೆ ಮಾಜಿ ಸಿಎಂ, ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ( NIKIL KUMARASWAMY ) ಅವರು ತಮ್ಮ ಕಾರ್ಯಕ್ರಮವನ್ನು ಮೊಟಕುಗೊಳಿಸಿದರು. ಆಂಬ್ಯುಲೆನ್ಸ್ ಲಭ್ಯವಿತ್ತು.
ಆದರೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಲಭ್ಯವಿರಲಿಲ್ಲ ಎಂದು ಕುಮಾರಸ್ವಾಮಿಯವರು ಆರೋಪಿಸಿದ್ದಾರೆ. ಅಲ್ಲದೆ, ಇಂತಹ ಕಳಪೆ ಸ್ಥಿತಿ ಕುರಿತು ಆರೋಗ್ಯ ಸಚಿವ ಡಾ ಕೆ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿಕೆ ಮತ್ತು ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರೊಂದಿಗೆ ಮಾತನಾಡಿದ ಅವರು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು.
ಇದನ್ನೂ ಓದಿ : – ಮೋದಿ ಆಧುನಿಕ ಭಸ್ಮಾಸುರ – ಕಾಂಗ್ರೆಸ್ ಮುಖಂಡ ಉಗ್ರಪ್ಪ ವ್ಯಂಗ್ಯ