ನಟಿ ರಮ್ಯಾ ( RAMYA) ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ( SWATI MUTHINA MALE HANIYE ) ಸಿನಿಮಾ ಮೂಡಿ ಬರುತ್ತಿದೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಮುಗಿದಿದೆ. ಆದರೆ ಈಗ ಶೀರ್ಷಿಕೆ ವಿಚಾರವಾಗಿ ಕಿರಿಕ್ ಶುರುವಾಗುವ ಸೂಚನೆ ಸಿಕ್ಕಿದೆ.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರು ಆಕ್ಷೇಪ ಎತ್ತಿದ್ದಾರೆ. ಈ ಕುರಿತು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು ಪತ್ರದಲ್ಲಿ ಖಡಕ್ ಆಗಿ ತಿಳಿಸಿದ್ದಾರೆ. ಇದನ್ನು ಓದಿ : – ಸಂವಿಧಾನ ಉಳಿಸಲು ಮೋದಿ ಹತ್ಯೆಗೆ ಕರೆ- ಕಾಂಗ್ರೆಸ್ ಮುಖಂಡನ ವಿರುದ್ಧ FIR
1990ರಲ್ಲಿ ‘ಬಣ್ಣದ ಗೆಜ್ಜೆ’ ಚಿತ್ರ ಬಿಡುಗಡೆ ಆಗಿತ್ತು. ಆ ಸಿನಿಮಾಗೆ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿದ್ದರು. ‘ಬಣ್ಣದ ಗೆಜ್ಜೆ’ ಚಿತ್ರದ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡು ಇಂದಿಗೂ ಫೇಮಸ್. ಇದೇ ಶೀರ್ಷಿಕೆಯನ್ನು ಇಟ್ಟುಕೊಂಡು ನಟಿ ರಮ್ಯಾ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ರಾಜೇಂದ್ರ ಸಿಂಗ್ ಬಾಬು ಅವರು ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿರುವುದಾಗಿ ತಿಳಿಸಿದ್ದಾರೆ.
ಹಾಗಾಗಿ ತಮ್ಮ ಪರ ವಕೀಲರ ಮೂಲಕ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಚಿತ್ರಕ್ಕೆ ‘ರೆಬಲ್ ಸ್ಟಾರ್’ ಅಂಬರೀಷ್ ಹಾಗೂ ಸುಹಾಸಿನಿ ಅವರು ಜೋಡಿ ಎಂಬುದು ವಿಶೇಷ. ಈ ಚಿತ್ರಕ್ಕೆ ಶೇ 80ರಷ್ಟು ಶೂಟಿಂಗ್ ಮುಗಿದಿತ್ತು. ಆದರೆ ಅಂಬರೀಷ್ ನಿಧನರಾದ ಬಳಿಕ ಕೆಲವು ದೃಶ್ಯಗಳ ಚಿತ್ರೀಕರಣ ಬಾಕಿ ಉಳಿದುಕೊಂಡಿತು ಎಂದು ಪತ್ರದಲ್ಲಿ ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದಾರೆ.
ಇದನ್ನು ಓದಿ : – ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ