ದುಬೈ ಪ್ರವಾಸಕ್ಕೆ ಹೊರಟ ಬಿ.ಎಸ್.ಯಡಿಯೂರಪ್ಪ -ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಲು ನಕಾರ

ಬಹಳ ಜನ ಪಕ್ಷಕ್ಕೆ ಇನ್ನೂ ಬರುವವರಿದ್ದಾರೆ. ನಮ್ಮ ಪಕ್ಷ ಇನ್ನಷ್ಟು ಬಲವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (YEDIYURAPPA )ಹೇಳಿದ್ದಾರೆ. ನಾಳೆ ದುಬೈ ಬಸವ ಸಮಿತಿಯಿಂದ ಬಿಎಸ್ವೈಗೆ ಬಸವ ಭೂಷಣ ಪ್ರಶಸ್ತಿ ಪ್ರದಾನ ಹಿನ್ನಲೆ ದುಬೈ ಪ್ರವಾಸಕ್ಕೆ ಬಿ.ಎಸ್ ಯಡಿಯೂರಪ್ಪ ಹೊರಟಿದ್ದಾರೆ.

ಹೊರಡುವ ಮುಂಚೆ ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ಗುರಿ 150 ಸ್ಥಾನ ಗೆಲ್ಲೋದು. ಪ್ರಧಾನಿಯವ್ರಿಗೆ 150 ಕ್ಷೇತ್ರ ಗೆಲ್ಲುವ ಭರವಸೆ ಕೊಟ್ಟಿದ್ದೇವೆ. ಆ ಗುರಿ ಮುಟ್ಟಲು ರಾಜ್ಯ ಪ್ರವಾಸ ಮಾಡ್ತೇವೆ. ಪ್ರತಿ ಜಿಲ್ಲೆಯಿಂದಲೂ ಪಕ್ಷಕ್ಕೆ ಬರ್ತಾರೆ. ಅದರಲ್ಲೂ ಮಂಡ್ಯದಿಂದ ಅನೇಕ ಜನ ಪಕ್ಷಕ್ಕೆ ಸೇರ್ಪಡೆ ಆಗ್ತಾರೆ ಎಂದು ಹೇಳಿದ್ರು. ಇದನ್ನೂಓದಿ : – ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಬಿಎಂಟಿಸಿ ಡ್ರೈವರ್

ಸಂಪುಟ ಸರ್ಜರಿ ವಿಚಾರವಾಗಿ ಮಾತನಾಡಿದ ಅವರು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ನಾವು ಬದ್ಧವಾಗಿರ್ತೀವಿ. ನಾವ್ಯಾರು ಅದನ್ನು ಹೇಳೋದಿಕ್ಕೆ. ಕೇಂದ್ರ ನಾಯಕರ ತೀರ್ಮಾನವೇ ಇದರಲ್ಲಿ ಅಂತಿಮ. ಇನ್ನು 3 ದಿನಗಳಲ್ಲಿ ಸಂಪುಟ ಪುನಾರಚನೆ ಆಗುತ್ತೆ ಎಂದು ತಿಳಿಸಿದ್ರು.
ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರ
ಯತ್ನಾಳ್ ಹೇಳಿಕೆ ಬಗ್ಗೆ ನಾನೇನೂ ಮಾತಾಡಲ್ಲ.ಪಕ್ಷದ ನಾಯಕರಿದ್ದಾರೆ, ಅವರು ನೋಡ್ಕೋತಾರೆ ಎಂದು ಹೇಳಿದ್ರು. ಇದನ್ನೂಓದಿ :- ಕೆ.ಎಸ್.ಆರ್. ಟಿ. ಸಿ ಹಾಗೂ ಇನೋವಾ ಕಾರ್ ನಡುವೆ ಡಿಕ್ಕಿ – ಸ್ಧಳದಲ್ಲೇ 3 ಮಂದಿ ಸಾವು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!