ಬೀದರ್: ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 20,902 ಮತಗಳ ಅಂತರದಲ್ಲಿ ಸಲಗಾರ್ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣ ಪರವಾಗಿ ಅನುಕಂಪದ ಅಲೆ ವರ್ಕೌಟ್ ಆಗಿಲ್ಲ.
ಶರಣು ಸಲಗರ ಒಟ್ಟು 70,556 ಮತಗಳನ್ನು ಪಡೆದುಕೊಂಡಿದ್ದಾರೆ. ಇವರ ವಿರುದ್ಧವಾಗಿ ಸ್ಪರ್ಧೆ ನಡೆಸಿದ್ದ ಕಾಂಗ್ರೆಸ್ ಅಭ್ಯರ್ಥಿ ಮಾಲಾ. ಬಿ ನಾರಾಯಣ ರಾವ್ ಅವರು 50,108 ಮತಗಳನ್ನು ಪಡೆದುಕೊಂಡಿದ್ದಾರೆ.
ಇನ್ನು ಜೆಡಿಎಸ್ ಅಭ್ಯರ್ಥಿ ಸೈಯದ್ ಅಲಿ ಕೇವಲ 11,390 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಶರಣು ಸಲಗರ ಒಟ್ಟು 20,902 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.