ಉಪಚುನಾವಣೆ ಬಹಿರಂಗ ಪ್ರಚಾರ ಅಂತ್ಯ

ಬೆಂಗಳೂರು : ರಾಜ್ಯದಲ್ಲಿ ನಡೆಯುವ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಉಪಚುನಾವಣೆ ಕಣ ರಂಗೇರಿದ್ದು, ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.

ಚುನಾವಣೆ ಆಯೋಗವು ಮುಕ್ತ ಮತ್ತು ನ್ಯಾಯ ಸಮ್ಮತ ಮತದಾನ ನಡೆಸಲು ಎಲ್ಲ ತಯಾರಿ ಮಾಡಿಕೊಂಡಿದೆ. ಪ್ರಚಾರ ಸಂದರ್ಭದಲ್ಲಿನ ಎಲ್ಲ ಅಕ್ರಮಗಳ ಮೇಲೂ ಕಣ್ಣಿಟ್ಟು ಪ್ರಕರಣ ದಾಖಲಿಸಿದೆ.

ಕ್ಷೇತ್ರದ ಮತದಾರರಲ್ಲದವರು ಸಂಜೆ 7 ರ ಒಳಗೆ ಆಯಾ ಕ್ಷೇತ್ರದಿಂದ ನಿರ್ಗಮಿಸಬೇಕು. ಇಲ್ಲದಿದ್ದಲ್ಲಿ ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ತಮ್ಮ ತಮ್ಮ ಅಭ್ಯರ್ಥಿಗಳ ಪರಿವಾಗಿ ಮತದಾರರ ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು ನಡೆಸಿದ್ದ ಮೂರು ಪಕ್ಷದ ನಾಯಕರು ಆ ಕ್ಷೇತ್ರದಿಂದ ತೆರಳಿದ್ದು, ನಾಳೆಯಿಂದ ಮನೆ ಮನೆ ಪ್ರಚಾರಕ್ಕೆ ಅಭ್ಯರ್ಥಿಗಳು ಮುಂದಾಗಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!