ಕಾರು ಹಾಗೂ ಟಿಟಿ ವಾಹನದ ನಡುವೆ ಡಿಕ್ಕಿ ಹೊಡೆದು ಸ್ಧಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ನಡೆದಿದೆ.
![](https://rajnewskannada.in/wp-content/uploads/2022/05/WhatsApp-Image-2022-05-10-at-9.33.17-AM-1024x461.jpeg)
ಕಾರಿನಲ್ಲಿದ್ದ ರಘು(27) ಸಂತೋಷ (21) ಮೃತಪಟ್ಟಿದ್ದಾರೆ. ಮೃತರು ಬೆಂಗಳೂರಿನ ಸಂಜಯ್ ನಗರದ ವಾಸಿಗಳಾಗಿದ್ದಾರೆ. ಇನ್ನೂಳಿದಂತೆ ವಿಜಯ್ (30) ಸ್ಥಿತಿ ಗಂಭೀರವಾಗಿದ್ದು, ಟಿಟಿ ವಾಹನದಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
![](https://rajnewskannada.in/wp-content/uploads/2022/05/WhatsApp-Image-2022-05-10-at-9.33.16-AM-1024x461.jpeg)
ಧರ್ಮಸ್ಥಳಕ್ಕೆ ಹೋಗುತಿದ್ದ ಟಿ.ಟಿ. ವಾಹನ. ಚಿಕ್ಕಮಗಳೂರಿನಿಂದ – ಬೆಂಗಳೂರಿಗೆ ವಾಪಸ್ ಹೋಗುತ್ತಿದ್ದ ಕಾರೊಂದು ಡಿವೈಡರ್ ದಾಟಿ ಟಿ.ಟಿ. ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆಗೆ ಸಂಬಂಧಿಸಿ ಕುಣಿಗಲ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ :- ಸಿದ್ದಾಪುರ ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು