State News

ಜಮಖಂಡಿಯಲ್ಲಿ ಕಾರು-ಬೈಕ್‌ ಗಳ ನಡುವೆ ಡಿಕ್ಕಿ: ಇಬ್ಬರ ದುರ್ಮರಣ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ-ಮುಧೋಳ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

30 ವರ್ಷದ ಮುತ್ತಪ್ಪ ಸನದಿ ಹಾಗೂ 20 ವರ್ಷದ ಬಸವರಾಜ ಗಲಗಲಿ ಮೃತರು. ಅವರೆಲ್ಲ ಮುಧೋಳ ತಾಲೂಕಿನ ಪಿ.ಎಂ.ಬುದ್ದಿ ಗ್ರಾಮದವರು ಎಂದು ತಿಳಿದುಬಂದಿದೆ.

ದ್ವಿಚಕ್ರ ವಾಹನ ಹಾಗೂ ಬುಲೇರೋ ವಾಹನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮುತ್ತಪ್ಪ ಸನದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಸವಾರ ಬಸವರಾಜ ಗಲಗಲಿ ತೀವ್ರ ಸ್ವರೂಪದ ಪೆಟ್ಟಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸೈ ಮಹೇಶ ಸಂಖ ಹಾಗೂ ಸಿಬ್ಬಂದಿಗಳು ಕೂಡಲೇ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!