ಕೆಲ ಸಂಘಟನೆಗಳು ಭಯೋತ್ಪಾದನಾ ಚಟುವಟಿಕೆಗಳNDNF ಭಾಗಿಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಮಾಡಿ ಪಿಎಫ್ ಐ (PFI) ನಿಷೇಧ ಮಾಡಿದೆ ಎಂದು ಕೋಲಾರದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota srinivas poojari) ಹೇಳಿದ್ದಾರೆ.
ಕೇಂದ್ರ ಸರ್ಕಾರ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ. ಯಾರನ್ನ ಯಾರೂ ಬೆದರಿಸುತ್ತಿಲ್ಲ, ಕಾನೂನನ್ನು ಕೈಗೆತ್ತಿಗೊಳ್ಳಲು ಮುಂದಾದ ಹಿನ್ನೆಲೆ ಇಂತಹ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು. ಕೇಂದ್ರ ಸರ್ಕಾರದ ಬಳಿ ಅಗತ್ಯ ದಾಖಲೆಗಳಿವೆ. ಹೀಗಾಗಿ ಎಲ್ಲಾ ಮಾಹಿತಿ ಆಧರಿಸಿ ಕೇಂದ್ರ ಕ್ರಮ ಕೈಗೊಂಡಿದೆ. ಸಹಜವಾಗಿ ಕಾನೂನು ಕೈಗೆತ್ತಿಕೊಳ್ಳುವ ಶಾಂತಿ ಭಂಗ ಮಾಡುವ ಎಲ್ಲಾ ಸಂಘಟನೆಗಳನ್ನ ನಿಷೇಧ ಮಾಡಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ (Congress) ಹಮ್ಮಿಕೊಂಡಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ಪಾದ ಯಾತ್ರೆಗಳು ಸಹಜ. ವಿರೋಧ ಪಕ್ಷದವರು ಹೀಗೆ ಮಾಡಿದ್ರೆ ಬಿಜೆಪಿ ಮೇಲೆ ಯಾವುದೆ ಪರಿಣಾಮ ಬೀರುವುದಿಲ್ಲ. ವಿರೋಧ ಪಕ್ಷವಾಗಿ ಅವರ ಪಾದ ಯಾತ್ರೆಯನ್ನ ನಾವು ಸ್ವಾಗತ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ : – ಕೇಂದ್ರ ಸರ್ಕಾರದ ನಿರ್ಧಾರವನ್ನ ಸ್ವಾಗತ ಮಾಡಲಾಗಿದೆ – ಕಾಂಗ್ರೆಸ್ ಟ್ವೀಟ್
ಇದೇ ವೇಳೆ ಉಲ್ಲೇರಹಳ್ಳಿಯಲ್ಲಿ ದಲಿತ ಕುಟುಂಬಕ್ಕೆ ದಂಡ ಹಾಕಿದ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು ಎಲ್ಲಾ ಮಾಹಿತಿ ಪಡೆದಿದ್ದು, ಇಂದು ಕುಟುಂಬಕ್ಕೆ ದೈರ್ಯ ತುಂಬುತ್ತೇನೆ. ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನ ನೀಡಲಾಗುವುದು. ಅವರನ್ನ ಜಿಲ್ಲಾಧಿಕಾರಿ ಕಚೇರಿಗೆ ಕರೆಸಿಕೊಂಡು ಮಾತನಾಡುವೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಇದನ್ನೂ ಓದಿ : – ನಿಮಗೆ ತಾಕತ್ತು ದಮ್ಮು ಇದ್ದರೆ ನಿಮ್ಮ ಪಕ್ಷದ ಶಾಸಕರನ್ನು ನಿಮ್ಮ ಪಕ್ಷದಲ್ಲಿ ಇಟ್ಟುಕೊಳ್ಳಿ – ಲಕ್ಷಣ್ ಸವದಿ