ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಮ್ಮೆ ಸಾಮಾನ್ಯ ಪ್ರವೇಶ ಪರೀಕ್ಷೆಯ (Common Entrance Test – CET) ಫಲಿತಾಂಶ ಪ್ರಕಟಿಸಲು ನಿರ್ಧರಿಸಿದೆ. ಸಿಬಿಎಸ್ಸಿ ಹಾಗೂ ಐಸಿಎಸ್ಸಿ ರಿಪಿಟರ್ಸ್ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಧಿಕಾರ ಮತ್ತೆ ಪ್ರಕಟಿಸಲಿದೆ. RANK ಪಟ್ಟಿಯೂ ಮತ್ತೊಮ್ಮೆ ಅಪ್ಡೇಟ್ ಆಗಲಿದೆ.
ಈ ನಡುವೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರ ಮನವೊಲಿಸಲು ಯತ್ನಿಸಿದ ಪೊಲೀಸರು, ಇಲ್ಲಿ ಪ್ರತಿಭಟನೆಗೆ ಅವಕಾಶ ನೀಡಲು ಸಾಧ್ಯವಿಲ್ಲ. ಒಂದು ವೇಳೆ ಪ್ರತಿಭಟನೆ ಮಾಡಬೇಕಾಗಿದ್ದರೆ ಫ್ರೀಡಂ ಪಾರ್ಕ್ಗೆ ಹೋಗಿ. ಇಲ್ಲದಿದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸಿ ಎಂದು ಸೂಚನೆ ನೀಡಿದರು. ಪೊಲೀಸರ ಮಾತು ಒಪ್ಪದ ವಿದ್ಯಾರ್ಥಿಗಳು ಹಾಗೂ ಪೋಷಕರು ಸ್ಥಳಕ್ಕೆ ಅಶ್ವತ್ಥ ನಾರಾಯಣ್ ಬರಬೇಕು ಎಂದು ಆಗ್ರಹಿಸಿದರು.
ಸಿಇಟಿ ಅಂಕದ ಜತೆ ಪಿಯು ಅಂಕ ಸೇರಿಸದೆ ಅನ್ಯಾಯ ಮಾಡಲಾಗಿದೆ ಎಂದು ಮಲ್ಲೇಶ್ವರಂ ಬಳಿ ಇರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿ ಮುಂದೆ ಸಿಇಟಿ (CET) ರಿಪೀಟರ್ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ಮಾಡಿದರು. ಇದನ್ನು ಓದಿ :- ಸಂಜಯ್ ರಾವತ್ ಬಂಧನ – ಸಂಸತ್ತಿನಲ್ಲಿ ವಿಪಕ್ಷಗಳಿಂದ ಭಾರಿ ಗದ್ದಲ, ಕಲಾಪ ಮುಂದೂಡಿಕೆ
ಕಳೆದ ಬಾರಿ ಕೋವಿಡ್ ಹಿನ್ನೆಲೆ ಪಿಯು ಪರೀಕ್ಷೆ ರದ್ದಾಗಿತ್ತು. ಆಗ ಕೇವಲ ಸಿಇಟಿ ಅಂಕ ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗಿತ್ತು. ಈ ವರ್ಷ ಸಿಇಟಿ ಜತೆ ಪಿಯು ಅಂಕವನ್ನು ಪರಿಗಣಿಸಲಾಗಿದೆ. ಅದೇ ರೀತಿ ನಮಗೂ ಸಿಇಟಿ, ಪಿಯು ಅಂಕ ಪರಿಗಣಿಸುವಂತೆ ಕೆಇಎ ಬೋರ್ಡ್ಗೆ ರಿಪೀಟರ್ ವಿದ್ಯಾರ್ಥಿಗಳು, ಪೋಷಕರು ಆಗ್ರಹಿಸಿದರು.
ಕಳೆದ ಬಾರಿ 90 ಅಂಕ ಪಡೆದವರಿಗೂ 15000 ಒಳಗೆ RANK ದೊರೆತಿತ್ತು. ಆದರೆ ಈ ಬಾರಿ 98 ಅಂಕ ಪಡೆದಿದ್ದರು ಸಹ 1 ಲಕ್ಷದ ಮೇಲೆ RANKING ದೊರೆತಿದೆ. ಈ ಸಮಸ್ಯೆ ಬಗೆಹರಿಸುವಂತೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದು, ಕೆಇಎ ಮುಂದೆ ಪೋಷಕರು ಹಾಗೂ ರಿಪೀಟರ್ ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದಾರೆ.
ಇದನ್ನು ಓದಿ :- ಹತ್ಯೆಗೀಡಾದ ಪ್ರವೀಣ್ , ಮಸೂದ್, ಫಾಝಿಲ್ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಿದ HDK