ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ – ಆರೋಪಿಗಳು ಆರು ದಿನಗಳ ಕಾಲ ಪೋಲೀಸ್ ಕಸ್ಟಡಿಗೆ

ವಾಸ್ತು ಚಂದ್ರಶೇಖರ್ ( chandrushekhar ) ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳನ್ನ ಮತ್ತೆ ಆರು ದಿನಗಳ ಕಾಲ ಪೋಲೀಸ್ ಕಸ್ಟಡಿಗೆ ನೀಡಲಾಗಿದೆ.

ಆರೋಪಿಗಳಾದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡನನ್ನ ಜುಲೈ 18 ರ ವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು ನ್ಯಾಯಾಧೀಶರ ಮುಂದೆ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ 15 ದಿನಗಳ ಕಾಲ ಕಸ್ಟಡಿಗೆ ಪೊಲೀಸ( police) ರು ಕೇಳಿದ್ದರು. ಆದರೆ ಕೇವಲ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನಾಯಾಧೀಶರಾದ ನಾಗೇಶ ನಾಯ್ಕ್ ಆದೇಶ ನೀಡಿದ್ದಾರೆ. ಇದನ್ನು ಓದಿ : – ಮಲೆನಾಡಿನಲ್ಲಿ ಅತಿವೃಷ್ಟಿ ಅಬ್ಬರ – ಶೃಂಗೇರಿ ಜಗದ್ಗುರುಗಳ ಮೊರೆ ಹೋದ ಜನಪ್ರತಿನಿಧಿಗಳು

ಈ ನಡುವೆ ಕೊಲೆ ಆರೋಪಿಗಳ ಆಪ್ತರ ವಿಚಾರಣೆಯನ್ನು ಕೂಡ ಪೊಲೀಸರು ನಡೆಸಿದ್ದು, ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಗುರೂಜಿ ಹತ್ಯೆಯ ಹಿಂದಿನ ನಿಖರವಾದ ರಹಸ್ಯ ಭೇದಿಸಲು ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸ್ ಆಯುಕ್ತರ ಕಚೇರಿ ಹರಸಾಹಸ ಪಡುತ್ತಿದ್ದು, ಖುದ್ದು ಕಮಿಷನರ್ ಅವರೇ ಆರೋಪಿಗಳ ವಿಚಾರಣೆ ನಡೆಸಿದ್ದಾರೆ.

ಇದನ್ನು ಓದಿ : – ಮಡಿಕೇರಿಯಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ- ಪರಿಹಾರ ಚೆಕ್ ವಿತರಣೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!