ವಾಸ್ತು ಚಂದ್ರಶೇಖರ್ ( chandrushekhar ) ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳನ್ನ ಮತ್ತೆ ಆರು ದಿನಗಳ ಕಾಲ ಪೋಲೀಸ್ ಕಸ್ಟಡಿಗೆ ನೀಡಲಾಗಿದೆ.
ಆರೋಪಿಗಳಾದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡನನ್ನ ಜುಲೈ 18 ರ ವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು ನ್ಯಾಯಾಧೀಶರ ಮುಂದೆ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ 15 ದಿನಗಳ ಕಾಲ ಕಸ್ಟಡಿಗೆ ಪೊಲೀಸ( police) ರು ಕೇಳಿದ್ದರು. ಆದರೆ ಕೇವಲ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನಾಯಾಧೀಶರಾದ ನಾಗೇಶ ನಾಯ್ಕ್ ಆದೇಶ ನೀಡಿದ್ದಾರೆ. ಇದನ್ನು ಓದಿ : – ಮಲೆನಾಡಿನಲ್ಲಿ ಅತಿವೃಷ್ಟಿ ಅಬ್ಬರ – ಶೃಂಗೇರಿ ಜಗದ್ಗುರುಗಳ ಮೊರೆ ಹೋದ ಜನಪ್ರತಿನಿಧಿಗಳು
ಈ ನಡುವೆ ಕೊಲೆ ಆರೋಪಿಗಳ ಆಪ್ತರ ವಿಚಾರಣೆಯನ್ನು ಕೂಡ ಪೊಲೀಸರು ನಡೆಸಿದ್ದು, ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಗುರೂಜಿ ಹತ್ಯೆಯ ಹಿಂದಿನ ನಿಖರವಾದ ರಹಸ್ಯ ಭೇದಿಸಲು ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸ್ ಆಯುಕ್ತರ ಕಚೇರಿ ಹರಸಾಹಸ ಪಡುತ್ತಿದ್ದು, ಖುದ್ದು ಕಮಿಷನರ್ ಅವರೇ ಆರೋಪಿಗಳ ವಿಚಾರಣೆ ನಡೆಸಿದ್ದಾರೆ.
ಇದನ್ನು ಓದಿ : – ಮಡಿಕೇರಿಯಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ- ಪರಿಹಾರ ಚೆಕ್ ವಿತರಣೆ