ಪಂಜಾಬ್ ( panjab ) ನಂತರ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ( arvind kerjiwal ) ಜನಾಭಿಪ್ರಾಯ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ.
ಜನರು ವಾಟ್ಸಪ್ ನಂಬರ್ 6357000360 ಮೂಲಕ ತಮ್ಮ ಅಭಿಪ್ರಾಯವನ್ನು ದಾಖಲಿಸಬಹುದಾಗಿದೆ. ಅಲ್ಲದೇ ವಾಯ್ಸ್ ಮೇಸೆಜ್ ಕೂಡಾ ಮಾಡಬಹುದಾಗಿದೆ. ನವೆಂಬರ್ 3ರವರೆಗೂ ವಾಟ್ಸಾಪ್ ಮತ್ತು ಎಸ್ ಎಂಎಸ್ ಮೂಲಕ ಕಳುಹಿಸಬಹುದಾಗಿದೆ. ನವೆಂಬರ್ 4ರಂದು ಫಲಿತಾಂಶವನ್ನು ಘೋಷಿಸಲಾಗುತ್ತದೆ. ಕೇಜ್ರಿವಾಲ್ ಇ-ಮೇಲ್ ಐಡಿಯೊಂದನ್ನು ಹಂಚಿಕೊಂಡಿದ್ದು, ಅದರ ಮೂಲಕವೂ ಸಂದೇಶ ಕಳುಹಿಸಲು ಅವಕಾಶವಿದೆ. ಪಂಜಾಬ್ ನಲ್ಲಿಯೂ ಇದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸಿ, ಭಗವಂತ್ ಮಾನ್ ( bhagavanth maan ) ಅವರನ್ನು ಆಯ್ಕೆ ಮಾಡಲಾಗಿತ್ತು. ನಂತರ ಪಕ್ಷ ಚುನಾವಣೆಯಲ್ಲಿ ಭರ್ಜರಿ ಜಯ ಭೇರಿ ಬಾರಿಸಿತ್ತು, ಮಾನ್ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದರು. 182 ಸದಸ್ಯ ಬಲದ ಗುಜರಾತ್ ವಿಧಾನಸಭಾ ಚುನಾವಣೆ ಈ ವರ್ಷಾಂತ್ಯದೊಳಗೆ ನಡೆಯಲಿದೆ. ಆದಾಗ್ಯೂ, ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಇನ್ನೂ ಪ್ರಕಟಿಸಿಲ್ಲ.
ಇದನ್ನೂ ಓದಿ : – ಪುನೀತ್ ಎಂದೆಂದಿಗೂ ಕರುನಾಡಿನ ಪವರ್ ಸ್ಟಾರ್ – ಅರವಿಂದ್ ಕ್ರೇಜಿವಾಲ್